ಚಿಕ್ಕಮಗಳೂರು: ಬೈಕ್ ಕಾರು ಢಿಕ್ಕಿ ► ಕಡಬದ ವ್ಯಕ್ತಿ ಗಂಭೀರ

(ನ್ಯೂಸ್ ಕಡಬ) newskadaba.com ಚಿಕ್ಕಮಗಳೂರು, ಅ.16. ಬೈಕ್ ಹಾಗೂ ಕಾರು ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಚಾರ್ಮಾಡಿ ಘಾಟ್ ನಲ್ಲಿ ಸೋಮವಾರದಂದು ನಡೆದಿದೆ.

ಗಂಭೀರ ಗಾಯಗೊಂಡ ಗಾಯಾಳುವನ್ನು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಕಡಬ ಸಮೀಪದ ಕುಟ್ರುಪ್ಪಾಡಿ ಗ್ರಾಮದ ಕಾಡುಮನೆ ನಿವಾಸಿ ಕೃಷ್ಣಪ್ಪ ಗೌಡ ಎಂಬವರ ಪುತ್ರ ನಾಗೇಶ್ ಎಂದು ಗುರುತಿಸಲಾಗಿದೆ. ಇವರು ತನ್ನ ಪಲ್ಸರ್ ಬೈಕಿನಲ್ಲಿ ಚಾರ್ಮಾಡಿ ಘಾಟ್ ನಲ್ಲಿ ತೆರಳುತ್ತಿದ್ದಾಗ ವಿರುದ್ಧ ದಿಕ್ಕಿನಿಂದ ಬಂದ ಟೊಯೋಟಾ ಎಟಿಯೋಸ್ ಕಾರು ನಡುವೆ ಢಿಕ್ಕಿ ಸಂಭವಿಸಿದೆ. ಘಟನೆಯಲ್ಲಿ ಗಂಭೀರ ಗಾಯಗೊಂಡಿರುವ ನಾಗೇಶ್ ಕೋಮಾವಸ್ಥೆಯಲ್ಲಿದ್ದು ಅಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಬಣಕಲ್ ಪೊಲೀಸರು ಅಗಮಿಸಿ ಪರಿಶೀಲನೆ ನಡೆಸಿದ್ದಾರೆ.

Scroll to Top