ರೈತರ ಆತ್ಮಹತ್ಯೆಗೆ ಅವರ ವೀಕ್ ಮೈಂಡ್ ಕಾರಣ ➤ ಬಿ.ಸಿ ಪಾಟೀಲ್ ವಿವಾದಾತ್ಮಕ ಹೇಳಿಕೆ

(ನ್ಯೂಸ್ ಕಡಬ) newskadaba.com ಮೈಸೂರು, ಜ. 19. ರೈತರ ಆತ್ಮಹತ್ಯೆಗೆ ಅವರ ವೀಕ್ ಮೈಂಡ್ ಕಾರಣ ಎಂದು ಕೃಷಿ ಸಚಿವ ಬಿ.ಸಿ ಪಾಟೀಲ್ ವಿವಾದಾತ್ಮಕ ಹೇಳಿಕೆಯೊಂದನ್ನು ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೈತರು ಆತ್ಮಹತ್ಯೆ ಮಾಡಿಕೊಳ್ಳಬಾರದು ಎಂಬ ನಿಟ್ಟಿನಲ್ಲಿ ಈ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದೇವೆ, ರೈತರು ಆತ್ಮಹತ್ಯೆ ಮಾಡಿಕೊಂಡಾಗ ಅವರ ಮನೆಗೆ ತೆರಳಿ ಸಾಂತ್ವಾನ ತಿಳಿಸಿದರೆ ಆತ್ಮಹತ್ಯೆ ನಿಲ್ಲುವುದಿಲ್ಲ, ಬದಲಾಗಿ ಕಾರ್ಯಕ್ರಮಗಳನ್ನು ಏರ್ಪಡಿಸಬೇಕು ಎಂದಿದ್ದಾರೆ. ಸರ್ಕಾರದ ನೀತಿಗಳು ರೈತರ ಆತ್ಮಹತ್ಯೆಗೆ ಕಾರಣವಲ್ಲ. ಅವರ ವೀಕ್ ಮೈಂಡ್ ಕಾರಣ ಕೆಲವರು ಆತ್ಮಹತ್ಯೆ ಮಾಡಿಕೊಳ್ಳುತ್ತಾರೆ ಎಂದು ತಿಳಿಸಿದ್ದಾರೆ.

error: Content is protected !!

Join the Group

Join WhatsApp Group