ಉಡುಪಿ: ಹತ್ತನೇ ತರಗತಿ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಬ್ರಹ್ಮಾವರ, ಜ. 21. ಹತ್ತನೇ ತರಗತಿಯ ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬ್ರಹ್ಮಾವರ ಠಾಣಾ ವ್ಯಾಪ್ತಿಯ ಚಾಂತಾರು ಎಂಬಲ್ಲಿ ನಡೆದಿದೆ.

ಆತ್ಮಹತ್ಯೆಗೈದವರನ್ನು ಅನುಶ್ರೀ ಎಂದು ಗುರುತಿಸಲಾಗಿದೆ. ಅನುಶ್ರೀ ಬ್ರಹ್ಮಾವರದ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕಿಯ ಪುತ್ರಿಯಾಗಿದ್ದು, ಆಕೆ ಅದೇ ಶಾಲೆಯ 10 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಳು ಎನ್ನಲಾಗಿದೆ. ಇಂದು ಸಂಜೆ ತಾಯಿ ಮನೆಗೆ ಬಂದಾಗ ಮಗಳು ನೇಣು ಬಿಗಿದ ಸ್ಥಿತಿಯಲ್ಲಿದ್ದು, ಗಾಬರಿಗೊಂಡ ತಾಯಿಯು ಸಮೀಪದದಲ್ಲಿದ್ದ ನಿರ್ಮಾಣ ಕಟ್ಟಡದ ಕೂಲಿ ಕಾರ್ಮಿಕರನ್ನು ಕರೆದು ನೇಣು ಕುಣಿಕೆಯಿಂದ ತಪ್ಪಿಸಿ ಉಡುಪಿಯ ಸರಕಾರಿ ಆಸ್ಪತ್ರೆಗೆ ಕರೆದೊಯ್ದರಾದರೂ ಅದಾಗಲೇ ವಿದ್ಯಾರ್ಥಿನಿ ಮೃತಪಟ್ಟಿದ್ದಳು. ಆತ್ಮಹತ್ಯೆಗೆ ನಿಖರ ಕಾರಣ ಸ್ಪಷ್ಟವಾಗಿಲ್ಲ.

Also Read  ಆರ್‌.ಎಸ್‌.ಎಸ್ ಯೂನಿಫಾರ್ಮ್ ಹಾಕಿ ಲಾಠಿ ಹಿಡಿದು ಫೋಸ್ ಕೊಟ್ಟ ಅಧ್ಯಾಪಕರು

error: Content is protected !!
Scroll to Top