(ನ್ಯೂಸ್ ಕಡಬ) newskadaba.com ಪುತ್ತೂರು, ಜ. 28. ತಾಲೂಕಿನ 21 ಗ್ರಾಮ ಪಂಚಾಯತ್ ಗಳ ಚುನಾವಣೆಯ ಬಳಿಕ ಇದೀಗ ಪಂಚಾಯತ್ ಗಳ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಆಯ್ಕೆಗೆ ಮೂವತ್ತು ತಿಂಗಳುಗಳ ಆಡಳಿತ ಅವಧಿಗೆ ಮೀಸಲಾತಿ ನಿಗದಿಪಡಿಸುವ ಪ್ರಕ್ರಿಯೆಯು ಪುತ್ತೂರು ಪುರಭವನದಲ್ಲಿ ನಡೆಯಿತು.

ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಯವರ ನೇತೃತ್ವದಲ್ಲಿ ನಡೆದ ಈ ಮೀಸಲಾತಿ ಪ್ರಕ್ರಿಯೆಯಲ್ಲಿ ಅಪರ ಜಿಲ್ಲಾಧಿಕಾರಿ ರೂಪಾ, ಸಹಾಯಕ ಆಯುಕ್ತ ಡಾ| ಯತೀಶ್ ಉಳ್ಳಾಲ್, ತಹಶೀಲ್ದಾರ್ ರಮೇಶ್ ಬಾಬು ಮೊದಲಾದವರು ಉಪಸ್ಥಿತರಿದ್ದರು.










