ಮಂಜೇಶ್ವರ: ಗಾಂಜಾ ಹಾಗೂ ಕೊಲೆ ಪ್ರಕರಣದಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ನಾಲ್ವರ ಬಂಧನ



(ನ್ಯೂಸ್ ಕಡಬ) newskadaba.com ಮಂಜೇಶ್ವರ, ಜ. 28. ಹಲವು ಪ್ರಕರಣಕ್ಕೆ ಸಂಬಂದಿಸಿದಂತೆ ತಲೆಮರೆಸಿಕೊಂಡಿದ್ದ ನಾಲ್ವರು ಆರೋಪಿಗಳನ್ನು ಬಂಧಿಸಿದ ಘಟನೆ ಮಂಜೇಶ್ವರದಲ್ಲಿ ನಡೆದಿದೆ.





ಬಂಧಿತ ಆರೋಪಿಗಳನ್ನು ಗಾಂಜಾ ಪ್ರಕರಣದಲ್ಲಿ ಭಾಗಿಯಾದ ಮಂಜೇಶ್ವರ ಕುಂಜತ್ತೂರಿನ ಮುಹಮ್ಮದ್ ಫತಮುದ್ದೀನ್(24), ಕೃಷ್ಣ(43), ಕೊಲೆ ಪ್ರಕರಣದ ಆರೋಪಿ ಸೆನೋಹರ್(23) ಹಾಗೂ ಶಸ್ತ್ರ ಕಾಯ್ದೆ ಪ್ರಕರಣಾದ ಆರೋಪಿ ಸಿದ್ದೀಕ್ ಎಂದು ಗುರುತಿಸಲಾಗಿದೆ. ಹಲವು ಪ್ರಕರಣಗಳಲ್ಲಿ ಭಾಗಿಯಾದ ಇವರು ಪೊಲೀಸರಿಗೆ ಸಿಗದೇ ತಲೆಮರೆಸಿಕೊಂಡಿದ್ದರು. ಇದೀಗ ಆರೋಪಿಗಳ ಸುಳಿವು ದೊರೆತ ಮೇರೆಗೆ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.






error: Content is protected !!
Scroll to Top