40 ಕಡೆ ಗೋಡಾನ್ ಗಳ ಮೇಲೆ ಸಿಬಿಐ ರೈಡ್..! ➤ ಅಕ್ಕಿ ಮತ್ತು ಗೋಧಿ ಮಾದರಿ ಸಂಗ್ರಹ

(ನ್ಯೂಸ್ ಕಡಬ) newskadaba.com ನವದೆಹಲಿ, ಜ. 29. ನೂತನ ಕೃಷಿ ನೀತಿಗಳನ್ನು ಹಿಂಪಡೆಯುವಂತೆ ಒತ್ತಾಯಿಸಿ ಕಳೆದೆರಡು ತಿಂಗಳುಗಳಿಂದ ರೈತರು ದೆಹಲಿಯ ಗಡಿ ಭಾಗಗಳಲ್ಲಿ ದೊಡ್ಡ ಮಟ್ಟದ ಹೋರಾಟ ಮುಂದುವರಿಸಿದ್ದು, ಈ ನಡುವೆಯೇ, ಕಳೆದ ರಾತ್ರಿ ಸಿಬಿಐ ಅಧಿಕಾರಿಗಳು ಪಂಜಾಬ್ ನಲ್ಲಿ ಸುಮಾರು 40 ದಾಸ್ತಾನು ಕೇಂದ್ರಗಳಿಗೆ ದಾಳಿ ನಡೆಸಿದ್ದಾರೆ.

ಈ ದಾಸ್ತಾನು ಕೇಂದ್ರಗಳಲ್ಲಿ ದಾಸ್ತಾನಿರಿಸಲಾಗಿದ್ದ ಅಕ್ಕಿ ಮತ್ತು ಗೋಧಿ ಮಾದರಿಗಳನ್ನು ಸಿಬಿಐ ಅಧಿಕಾರಿಗಳು ಮುಟ್ಟುಗೋಲು ಹಾಕಿದ್ದಾರೆ. ಪಂಜಾಬ್ ಗ್ರೇನ್ಸ್ ಪ್ರೊಕ್ಯುರ್ ಮೆಂಟ್ ಕಾರ್ಪೊರೇಶನ್, ಪಂಜಾಬ್ ವೇರ್ ಹೌಸಿಂಗ್ ಮತ್ತು ಫುಡ್ ಕಾರ್ಪೊರೇಶನ್ ಇಂಡಿಯಾಕ್ಕೆ ಸೇರಿದ ದಾಸ್ತಾನು ಕೇಂದ್ರಗಳ ಮೇಲೆ ದಾಳಿ ಮಾಡಲಾಗಿದೆ.

Also Read  ಉಜಿರೆಯಲ್ಲಿ 8 ವರ್ಷದ ಬಾಲಕನ ಅಪಹರಣ ಪ್ರಕರಣ ➤ ಆರೋಪಿಗಳು ಖಾಕಿ ಬಲೆಗೆ

error: Content is protected !!
Scroll to Top