ವಿಪತ್ತು ನಿರ್ವಹಣೆ ಮತ್ತು ರಕ್ಷಣಾ ತರಬೇತಿ ಶಿಬಿರ

(ನ್ಯೂಸ್ ಕಡಬ) newskadaba.com ಮಂಗಳೂರು, . 31. ಪ್ರಸ್ತುತ ಸಾಲಿನಲ್ಲಿ ದ.ಕ ಜಿಲ್ಲೆಯ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಜಿಲ್ಲಾ ಪಂಚಾಯತ್ ಅನುದಾನದಡಿ ಜಿಲ್ಲೆಯ ಯುವಜನರಿಗೆ 10 ದಿನಗಳ ವಿಪತ್ತು ನಿರ್ವಹಣೆ ಮತ್ತು ರಕ್ಷಣಾ ತರಬೇತಿ ಶಿಬಿರವನ್ನು ಆಯೋಜಿಸಲಾಗಿದ್ದು, ಆಸಕ್ತ ಯುವಜನರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಶಿಬಿರದಲ್ಲಿ ಭಾಗವಹಿಸುವ ಯುವಜನರು 18 ರಿಂದ 30 ವರ್ಷ ವಯೋಮಾನದವರಾಗಿರಬೇಕು. ಅರ್ಜಿ ಸಲ್ಲಿಸಲು ಫೆಬ್ರವರಿ 5 ಕೊನೆಯ ದಿನ.


ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಂಗಳಾ ಕ್ರೀಡಾಂಗಣ, ದೂ.ಸಂಖ್ಯೆ: 0824-2451264 ಹಾಗೂ ಇ-ಮೇಲ್ adyssdk@yahoo.com ನ್ನು ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

error: Content is protected !!

Join the Group

Join WhatsApp Group