➤➤ Breaking news ಸುಬ್ರಹ್ಮಣ್ಯ: ರಸ್ತೆ ದಾಟುತ್ತಿದ್ದ ವೇಳೆ ಬಸ್ ಢಿಕ್ಕಿ ಹೊಡೆದು ಪರಾರಿ ➤ ವ್ಯಕ್ತಿ ಗಂಭೀರ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಫೆ.‌ 01. ಇಲ್ಲಿನ ಕೈಕಂಬ ಎಂಬಲ್ಲಿ ಟೂರಿಸ್ಟ್ ವಾಹನ ಚಾಲಕನಿಗೆ ರಸ್ತೆ ದಾಟುತ್ತಿದ್ದ ವೇಳೆ ಸರ್ಕಾರಿ ಬಸ್ ಡಿಕ್ಕಿ ಹೊಡೆದ ಘಟನೆ ನಡೆದಿದೆ.

ಗಂಭೀರ ಗಾಯಗೊಂಡವರನ್ನು ಬೆಂಗಳೂರು ಮೂಲದವರಾದ ಭೂತೇಶ್ ಪಿ. ಜೆ ಎಂದು ಗುರುತಿಸಲಾಗಿದೆ. ಇವರು ಸುಬ್ರಹ್ಮಣ್ಯ ದೇವಸ್ಥಾನಕ್ಕೆಂದು ಬಂದಿದ್ದು, ಕೈಕಂಬ ಎಂಬಲ್ಲಿ ರಸ್ತೆ ದಾಟುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಅಪಘಾತದಿಂದಾಗಿ ಭೂತೇಶ್ ಸ್ಥಿತಿ ಚಿಂತಾಜನಕವಾಗಿದ್ದು, ಕೆ.ಎಸ್.ಆರ್‍.ಟಿ.ಸಿ ಬಸ್ ಚಾಲಕ ಅಪಘಾತ ನಡೆದ ಕೂಡಲೇ ಸ್ಥಳದಿಂದ ಎಸ್ಕೇಪ್ ಆಗಿದ್ದಾರೆ. ತಕ್ಷಣವೇ ಸಾರ್ವಜನಿಕರ ಸಹಕಾರದಿಂದ ಆಂಬುಲೆನ್ಸ್ ಮೂಲಕ ವ್ಯಕ್ತಿಯನ್ನು ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ. ಸ್ಥಳಕ್ಕೆ ಕಡಬ ಠಾಣಾ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

error: Content is protected !!
Scroll to Top