ಶಿರಾಡಿ: ರಸ್ತೆಗೆ ಉರುಳಿದ್ದ ಗ್ಯಾಸ್ ಟ್ಯಾಂಕರ್ ತೆರವು ➤ ಹೆದ್ದಾರಿ ಸಂಚಾರಕ್ಕೆ ಮುಕ್ತ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಫೆ.05. ಅನಿಲ ತುಂಬಿದ್ದ ಟ್ಯಾಂಕರೊಂದು ಪಲ್ಟಿಯಾದ ಪರಿಣಾಮ ಬಂದ್ ಆಗಿದ್ದ ರಾಷ್ಟ್ರೀಯ ಹೆದ್ದಾರಿಯು ಇದೀಗ ಸಂಚಾರಕ್ಕೆ ಮುಕ್ತವಾಗಿದೆ.

ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಶಿರಾಡಿ ಸಮೀಪದ ಕೆಂಪುಹೊಳೆ ಎಂಬಲ್ಲಿ ಶುಕ್ರವಾರದಂದು ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿದ್ದರಿಂದ ರಸ್ತೆ ತಡೆಯುಂಟಾಗಿತ್ತು. ಅಪರಾಹ್ನ 2 ಗಂಟೆಯ ವೇಳೆಗೆ ಟ್ಯಾಂಕರನ್ನು ತೆರವುಗೊಳಿಸಲಾಗಿದ್ದು, ರಸ್ತೆ ಸಂಚಾರಕ್ಕೆ ಮುಕ್ತವಾಗಿದೆ.

 

error: Content is protected !!

Join the Group

Join WhatsApp Group