ವಿಟ್ಲ: ಟಿಪ್ಪರ್ ಹಾಗೂ ಓಮ್ನಿ ನಡುವೆ ಢಿಕ್ಕಿ ➤ ಇಬ್ಬರಿಗೆ ಗಾಯ

(ನ್ಯೂಸ್ ಕಡಬ) newskadaba.com ವಿಟ್ಲ, ಫೆ. 06. ಟಿಪ್ಪರ್ ಲಾರಿ ಹಾಗೂ ಓಮ್ನಿ ಕಾರಿನ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಇಬ್ಬರು ಗಾಯಗೊಂಡ ಘಟನೆ ವಿಟ್ಲ- ಪುತ್ತೂರು ರಸ್ತೆಯ ಕಲ್ಲಕಟ್ಟ ಎಂಬಲ್ಲಿ ನಡೆದಿದೆ.

ಗಾಯಾಳುಗಳನ್ನು ಓಮ್ನಿ ಚಾಲಕ ಸುದರ್ಶನ ಶರ್ಮಾ ಮತ್ತು ಅವರ ತಂದೆ ಗಣಪತಿ ಭಟ್ ಎಂದು ಗುರುತಿಸಲಾಗಿದೆ. ಇವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಭೇಟಿ ನೀಡಿದ ವಿಟ್ಲ ಪೊಲೀಸರು ವಾಹನಗಳನ್ನು ವಶಪಡಿಸಿ ಕೇಸು ದಾಖಲಿಸಿಕೊಂಡಿದ್ದಾರೆ.

Scroll to Top