ಪುಣ್ಚಪ್ಪಾಡಿ : ಹಿರಿಯ ವಿದ್ಯಾರ್ಥಿ ಸಂಘದಿಂದ ಪುಸ್ತಕ ವಿತರಣೆ

(ನ್ಯೂಸ್ ಕಡಬ) newskadaba.com ಸವಣೂರು, ಜೂ.08. ಪುಣ್ಚಪ್ಪಾಡಿ ಹಿ.ಪ್ರಾ.ಶಾಲೆಯಲ್ಲಿ ಒಂದನೇ ತರಗತಿಗೆ ದಾಖಲಾದ ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿ ಸಂಘದ ವತಿಯಿಂದ ಪುಸ್ತಕ ವಿತರಣಾ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಎಸ್.ಡಿ.ಎಮ್.ಸಿ ಉಪಾಧ್ಯಕ್ಷೆ ಶ್ರೀಮತಿ ಸುಮತಿ ವಹಿಸಿದ್ದರು. ಶಾಲಾ ನೂತನ ಕಟ್ಟಡ ನಿರ್ಮಾಣ ಸಮಿತಿಯ ಅಧ್ಯಕ್ಷ ,ಸವಣೂರು ಗ್ರಾ.ಪಂ.ಮಾಜಿ ಉಪಾಧ್ಯಕ್ಷ ಪಿ.ಡಿ ಗಂಗಾಧರ್ ರೈ ವಿದ್ಯಾಥಿಗಳಿಗೆ ಪುಸ್ತಕವನ್ನು ವಿತರಿಸಿದರು. ವೇದಿಕೆಯಲ್ಲಿ ಸವಣೂರು ಗ್ರಾ.ಪಂ ಸದಸ್ಯರಾದ ಗಿರಿಶಂಕರ್ ಸುಲಾಯ, ನಾಗೇಶ್ ಓಡಂತರ್ಯ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಅನಿತ್ ಕುಮಾರ್ , ಶಾಲಾ ಮುಖ್ಯಗುರು ರಶ್ಮಿತಾ ಎನ್. ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಹಿರಿಯ ವಿದ್ಯಾರ್ಥಿಗಳು, ವಿದ್ಯಾರ್ಥಿಗಳ ಪೋಷಕರು, ಎಸ್.ಡಿ.ಎಮ್.ಸಿ ಸದಸ್ಯರು, ವಿದ್ಯಾರ್ಥಿಗಳು ಭಾಗವಹಿಸಿದ್ದರು. ಹಿರಿಯ ವಿದ್ಯಾರ್ಥಿಗಳಾದ ದಕ್ಷಿತ್ ಸ್ವಾಗತಿಸಿ, ಗಣೇಶ್ ಭಟ್ ವಂದಿಸಿದರು. ಹಿರಿಯ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಯತೀಶ್ ಕುಮಾರ್ ಕೆ ಎಮ್ ಕಾರ್ಯಕ್ರಮ ನಿರೂಪಿಸಿದರು.

error: Content is protected !!

Join the Group

Join WhatsApp Group