ಸುಳ್ಯ: ಅಪರಿಚಿತ ಮೃತದೇಹದ ಗುರುತು ಪತ್ತೆ ➤ ಪಂಜದ ಗಣೇಶ್ ಚೀಮುಳ್ಳು ಆತ್ಮಹತ್ಯೆಗೆ ಶರಣಾದ ವ್ಯಕ್ತಿ

(ನ್ಯೂಸ್ ಕಡಬ) newskadaba.com ಸುಳ್ಯ, ಫೆ. 10. ತಾಲೂಕಿನ ಕಲ್ಲುಗುಂಡಿ ಸಮೀಪ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆಯಾಗಿದ್ದು, ಇದೀಗ ಮೃತ ವ್ಯಕ್ತಿಯ ಗುರುತು ಪತ್ತೆಯಾಗಿದೆ.


ಮೃತ ವ್ಯಕ್ತಿಯನ್ನು ಪಂಜ ಸಮೀಪದ ಪಂಬೆತ್ತಾಡಿಯ ರಾಮಣ್ಣ ನಾಯ್ಕ ಅವರ ಪುತ್ರ ಗಣೇಶ್ ಚೀಮುಳ್ಳು ಎಂದು ಗುರುತಿಸಲಾಗಿದೆ. ಮಂಗಳೂರು – ಮಡಿಕೇರಿ ರಾ.ಹೆದ್ದಾರಿಯ ಕಲ್ಲುಗುಂಡಿ ಸಮೀಪದ ರಬ್ಬರ್‌ ತೋಟವೊಂದರಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಶವ ಇಂದು ಮುಂಜಾನೆ ಪತ್ತೆಯಾಗಿದ್ದು, ಈ ಕುರಿತು ಘಟನಾ ಸ್ಥಳಕ್ಕೆ ಭೇಟಿ ನೀಡಿ ತನಿಖೆ ನಡೆಸಿದ ಸುಳ್ಯ ಪೋಲಿಸರು ಮೃತರ ಗುರುತು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ. ಮೃತರ ತಂದೆ ತಾಯಿ ವಯೋವೃದ್ಧರಾಗಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

Also Read  ಬಾವಿಗೆ ಬಿದ್ದು ಕಾಡುಕೋಣ ಮೃತ್ಯು - ಅರಣ್ಯ ಇಲಾಖೆಯಿಂದ ಕಾರ್ಯಾಚರಣೆ

error: Content is protected !!
Scroll to Top