ನೆಲ್ಯಾಡಿಯ ವ್ಯಕ್ತಿ ಕಾಸರಗೋಡಿನಲ್ಲಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಕಡಬ, ಫೆ.10. ನೆಲ್ಯಾಡಿಯ ವ್ಯಕ್ತಿಯೋರ್ವರು ಕಾಸರಗೋಡಿನಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬುಧವಾರದಂದು ನಡೆದಿದೆ.

ಆತ್ಮಹತ್ಯೆಗೈದ ವ್ಯಕ್ತಿಯನ್ನು ನೆಲ್ಯಾಡಿ ಹೊಸಮಜಲು ನಿವಾಸಿ ಇದ್ದಿನಬ್ಬ ಎಂಬವರ ಪುತ್ರ ಇಲ್ಯಾಸ್(38) ಎಂದು ಗುರುತಿಸಲಾಗಿದೆ. ಕಾಸರಗೋಡಿನ ಹೋಟೆಲ್ ಒಂದರಲ್ಲಿ ಉದ್ಯೋಗದಲ್ಲಿದ್ದ ಇಲ್ಯಾಸ್ ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದುಬಂದಿದೆ. ಮೃತದೇಹದ ಮರಣೋತ್ತರ ಪರೀಕ್ಷೆಯನ್ನು ಕಾಸರಗೋಡಿನಲ್ಲಿ ನಡೆಸಿ ನೆಲ್ಯಾಡಿಗೆ ತರಲಾಗಿದೆ. ಮೃತರು ಪತ್ನಿ, ಓರ್ವ ಪುತ್ರ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.

Also Read  ಫೆಬ್ರವರಿಯಲ್ಲಿ ಲೋಕಾರ್ಪಣೆಗೊಳ್ಳಲಿದೆ ಗುರುಪುರ ಸೇತು

error: Content is protected !!
Scroll to Top