ಪಟಾಕಿ ಅವಾಂತರ..!!! ► ಬಾಲಕನ 2 ಕಣ್ಣು ಹಾಗೂ ಕೈ ಕಾಲುಗಳಿಗೆ ಗಂಭೀರ ಗಾಯ

(ನ್ಯೂಸ್ ಕಡಬ) newskadaba.com ಬಳ್ಳಾರಿ, ಅ.18. ಬಾಲಕನೊಬ್ಬ ಪಟಾಕಿ ಸಿಡಿಸುವ ವೇಳೆ ಗಂಭೀರವಾಗಿ ಗಾಯಗೊಂಡ ಘಟನೆ ಬಳ್ಳಾರಿಯ ಬೆಂಗಳೂರು ರಸ್ತೆಯ ನಾಲ್ ಕಮಾನ್ ಬಳಿ ಮಂಗಳವಾರ ಬೆಳಿಗ್ಗೆ ನಡೆದಿದೆ.


11 ವರ್ಷದ ಬಾಲಕ ನರಸಿಂಹ ಪಟಾಕಿ ಸಿಡಿಸುವ ವೇಳೆ ಗಂಭೀರವಾಗಿ ಗಾಯಗೊಂಡಿದ್ದಾನೆ. ಏಕಕಾಲಕ್ಕೆ ಸಾಕಷ್ಟು ಪಟಾಕಿಗಳನ್ನು ಒಟ್ಟಾಗಿ ಸೇರಿಸಿ ಸಿಡಿಸುವ ವೇಳೆ ಗಂಭೀರವಾಗಿ ಗಾಯಗೊಂಡಿದ್ದಾನೆ. ಘಟನೆಯಲ್ಲಿ ಬಾಲಕ ನರಸಿಂಹನ 2 ಕಣ್ಣು ಹಾಗೂ ಕೈ ಕಾಲುಗಳು ಸಾಕಷ್ಟು ಸುಟ್ಟಿದ್ದು, ಗಾಯಾಳು ಬಾಲಕನನ್ನು ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

Also Read  ಮಂಗಳೂರು: ಮದರಸ ವಿದ್ಯಾರ್ಥಿ ಮೇಲೆ ಹಲ್ಲೆ ➤ ಪ್ರಕರಣದ ಹಿನ್ನೆಲೆ ಬಹಿರಂಗ

ಕ್ಷಣಾರ್ಧದಲ್ಲೆ ಘಟನೆ ನಡೆದ ಪರಿಣಾಮ ಬಾಲಕನನ್ನು ರಕ್ಷಣೆ ಮಾಡಲು ವಿಫಲವಾಗಿದೆ. ಬಾಲಕನ ಸ್ಥಿತಿ ಗಂಭೀರವಾಗಿದ್ದು ಪೋಷಕರು ಕಣ್ಣೀರು ಸುರಿಸುತ್ತಿದ್ದಾರೆ.

error: Content is protected !!
Scroll to Top