ಸಾಲ ನೀಡಲಿಲ್ಲವೆಂದು ವೃದ್ದ ದಂಪತಿಯ ಮೇಲೆ ಹಲ್ಲೆ ➤ ವೃದ್ದ ಮೃತ್ಯು

(ನ್ಯೂಸ್ ಕಡಬ) newskadaba.com ಶಿವಮೊಗ್ಗ, ಫೆ. 13. ಸಾಲ ನೀಡಲಿಲ್ಲ ಎಂಬ ಹಿನ್ನೆಲೆ ಅಂಗಡಿ ಮಾಲಕ ಹಾಗೂ ಅವರ ಪತ್ನಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಪರಿಣಾಮ ಅಂಗಡಿ ಮಾಲಕ ಮೃತಪಟ್ಟಿರುವ ಘಟನೆ ತಾಲೂಕಿನ ಸಿದ್ದಾಪುರದಲ್ಲಿ ನಡೆದಿದೆ.

ಮೃತರನ್ನು ನ್ಯಾಮತಿ ತಾಲೂಕಿನ ಸಿದ್ದಾಪುರದ ವಿರೂಪಾಕ್ಷಪ್ಪ ಎಂದು ಗುರುತಿಸಲಾಗಿದೆ. ಸಿಗರೇಟ್ ಹಾಗೂ ಕಿರಾಣಿ ಸಾಮಾನು ಸಾಲ ನೀಡಲಿಲ್ಲ ಎಂದು ಟಿ.ಮಂಜನಾಯ್ಕ, ಸಿದ್ದೇಶ್ ನಾಯ್ಕ ಮತ್ತು ನಾಗರಾಜ್ ನಾಯ್ಕ ಎಂಬ ಆರೋಪಿಗಳು ರಾಡ್ ನಿಂದ ಹಲ್ಲೆ ನಡೆಸಿದ್ದಾರೆ. ಈ ಘಟನೆ ಫೆ.4ರಂದು ನಡೆದಿದ್ದು, ವಿರೂಪಾಕ್ಷಪ್ಪ ಹಾಗೂ ಅವರ ಪತ್ನಿಯ ಮೇಲೆ ರಾಡ್ ನಿಂದ ಹಲ್ಲೆ ನಡೆಸಲಾಗಿದ್ದು, ತಕ್ಷಣವೇ ಗಾಯಾಳುಗಳನ್ನ ಶಿವಮೊಗ್ಗದ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಶುಕ್ರವಾರ ಬೆಳಗ್ಗೆ ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಈ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

error: Content is protected !!

Join the Group

Join WhatsApp Group