ಕಡಬ: ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಸುಧೀರ್ ಕುಮಾರ್ ಶೆಟ್ಟಿ ಆಯ್ಕೆ

(ನ್ಯೂಸ್ ಕಡಬ) newskadaba.com ಸುಳ್, ಫೆ. 14. ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಶಿಫಾರಸ್ಸಿನ ಮೇರೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ನೂತನ ಅಧ್ಯಕ್ಷರ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ 6 ಬ್ಲಾಕ್ ಕಾಂಗ್ರೆಸ್ ಸಮಿತಿಗಳಿಗೆ ನೂತನ ಅಧ್ಯಕ್ಷರ ನೇಮಕ ಮಾಡಲಾಗಿದ್ದು, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಮಹಮ್ಮದ್ ನೂತನ ಅಧ್ಯಕ್ಷರ ಪಟ್ಟಿಯನ್ನು ಘೋಷಣೆ ಮಾಡಿದ್ದಾರೆ. ಸುಳ್ಯ ವಿಧಾನಸಭಾ ಕ್ಷೇತ್ರದ ಸುಳ್ಯ ಬ್ಲಾಕ್ ಗೆ ಪಿ.ಸಿ.ಜಯರಾಮ, ಕಡಬ ಬ್ಲಾಕ್ ಗೆ ಸುಧೀರ್ ಕುಮಾರ್ ಶೆಟ್ಟಿ, ಪುತ್ತೂರು ವಿಧಾನಸಭಾ ಕ್ಷೇತ್ರದ ವಿಟ್ಲ- ಉಪ್ಪಿನಂಗಡಿ ಬ್ಲಾಕ್ ಅಧ್ಯಕ್ಷರಾಗಿ ಡಾ.ರಾಜಾರಾಮ್ ಕೆ.ಬಿ, ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬೆಳ್ತಂಗಡಿ ನಗರ ಬ್ಲಾಕ್ ಗೆ ಕೆ‌.ಶೈಲೇಶ್ ಕುಮಾರ್, ಬೆಳ್ತಂಗಡಿ ಗ್ರಾಮೀಣ ಬ್ಲಾಕ್ ಗೆ ರಂಜನ್ ಜಿ ಗೌಡ, ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಮಂಗಳೂರು ನಗರ ಬ್ಲಾಕ್ ಅಧ್ಯಕ್ಷರಾಗಿ ಬಿ.ಪ್ರಕಾಶ್ ಸಾಲಿಯಾನ ಆಯ್ಕೆಯಾಗಿದ್ದಾರೆ ಎಂದು ಕೆಪಿಸಿಸಿ ಪ್ರಕಟಣೆ ತಿಳಿಸಿದೆ.

Also Read  ಮುಂಬೈಗೆ ಪರಾರಿಯಾಗುತ್ತಿದ್ದ ಅನ್ಯಕೋಮಿನ ಜೋಡಿ- ಪೊಲೀಸ್ ವಶಕ್ಕೆ ➤ ಭಜರಂಗದಳದ ಕಾರ್ಯಕರ್ತರಿಂದ ಯಶಸ್ವಿ ಕಾರ್ಯಾಚರಣೆ

error: Content is protected !!
Scroll to Top