? ಮರ್ಧಾಳ: ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಕಾರು ➤ ಪ್ರಯಾಣಿಕರು ಅಪಾಯದಿಂದ ಪಾರು

(ನ್ಯೂಸ್ ಕಡಬ) newskadaba.com ಮರ್ಧಾಳ, ಫೆ. 14. ಚಾಲಕನ ನಿಯಂತ್ರಣ ತಪ್ಪಿದ ಸ್ವಿಫ್ಟ್ ಕಾರೊಂದು ರಸ್ತೆ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ ಕಂಬ ಮುರಿದಿದ್ದು, ಕಾರು ಸಂಪೂರ್ಣ ಜಖಂಗೊಂಡ ಘಟನೆ ಧರ್ಮಸ್ಥಳ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಮರ್ಧಾಳ ಎಂಬಲ್ಲಿ ನಡೆದಿದೆ.

ಧರ್ಮಸ್ಥಳದಿಂದ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ ಕಾರು ಮರ್ಧಾಳ ಜಂಕ್ಷನ್ ಬಳಿ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದಿದೆ. ಚಾಲಕ ನಿದ್ದೆಯ ಮಂಪರಿನಲ್ಲಿದ್ದುದೇ ಘಟನೆಗೆ ಕಾರಣವೆನ್ನಲಾಗಿದೆ. ಕಾರಿನಲ್ಲಿದ್ದವರು ಪವಾಡಸದೃಶ ಅಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಮೆಸ್ಕಾಂ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Also Read  ಡಿಕೆಶಿ ಒಡೆತನದ ಶಾಲೆಗೆ ಬಾಂಬ್ ಬೆದರಿಕೆ ಹಾಕಿದ್ದ ವಿದ್ಯಾರ್ಥಿ ಪೊಲೀಸ್ ವಶಕ್ಕೆ ➤ 10ನೇ ತರಗತಿ ವಿದ್ಯಾರ್ಥಿಯ ಪ್ಲಾನ್ ಗೆ ಬೆಚ್ಚಿಬಿದ್ದ ಜನತೆ

error: Content is protected !!
Scroll to Top