ಸುಳ್ಯ: ಟಿ.ಎಂ.ಶಹೀದ್ ತೆಕ್ಕಿಲ್ ರವರಿಗೆ 28ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಸನ್ಮಾನ

(ನ್ಯೂಸ್ ಕಡಬ) newskadaba.com ಸುಳ್ಯ, ಫೆ. 14. ಅರಂತೋಡು ಸಾಮಾಜಸೇವೆ ಮತ್ತು ಶೈಕ್ಷಣಿಕ ಕ್ಷೇತ್ರದಲ್ಲಿ ಕ್ರಿಯಾಶೀಲರಾಗಿರುವ ತೆಕ್ಕಿಲ್ ಪ್ರತಿಷ್ಠಾನದ ಸ್ಥಾಪಕಾಧ್ಯಕ್ಷರಾದ ಟಿ.ಎಂ.ಶಾಹೀದ್ ತೆಕ್ಕಿಲ್ ರವರನ್ನು ಮಂಗಳೂರು ಶಾರದಾ ವಿಧ್ಯಾಲಯದಲ್ಲಿ ನಡೆದ 28ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಸಮ್ಮಾನಿಸಲಾಯಿತು.

 

ಈ ಸಮಾರಂಭದಲ್ಲಿ ಸಾಹಿತ್ಯ ಪರಿಷತ್ ಜಿಲ್ಲಾ ಅಧ್ಯಕ್ಷ ಎಸ್.ಪ್ರದೀಪ್ ಕುಮಾರ ಕಲ್ಕೂರ, ಹರಿಕೃಷ್ಣ ಪುನರೂರು, ಚಲನಚಿತ್ರ ನಟ ಗುರುಕಿರಣ್, ಪ್ರೊಫೆಸರ್ ವಿವೇಕ್ ರೈ, ಇತಿಹಾಸ ಸಂಶೋಧಕ ಪುಂಡಿಕ್ಕಾ ಗಣಪತಿ ಭಟ್, ಡಾ. ಪ್ರಭಾಕರ ಜೋಶಿ ಸೇರಿದಂತೆ ಗಣ್ಯ ವ್ಯಕ್ತಿಗಳ ಸಮ್ಮುಖದಲ್ಲಿ ಸನ್ಮಾನಿಸಲಾಯಿತು.

Also Read  ಬಲ್ಯ: ಕಡವೆಯನ್ನು ಹೋಲುವ ಕಾಡುಪ್ರಾಣಿ ಕೊಳೆತ ಸ್ಥಿತಿಯಲ್ಲಿ ಪತ್ತೆ ► ದುರ್ನಾತದಿಂದ ಮೂಗು ಮುಚ್ಚಬೇಕಾದ ಪರಿಸ್ಥಿತಿ

error: Content is protected !!
Scroll to Top