► ದಕ್ಷಿಣ ಕನ್ನಡದ ನೂತನ ಜಿಲ್ಲಾಧಿಕಾರಿಯಾಗಿ ಶಶಿಕಾಂತ್ ಸೆಂಥಿಲ್ ಅಧಿಕಾರ ಸ್ವೀಕಾರ

(ನ್ಯೂಸ್ ಕಡಬ) newskadaba.com ಮಂಗಳೂರು, ಅ.19. ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ನಿರ್ದೇಶಕರಾಗಿದ್ದ ಶಶಿಕಾಂತ್ ಸೆಂಥಿಲ್ ಗುರುವಾರ ಅಧಿಕಾರ ಸ್ವೀಕರಿಸಿದರು.

ಪ್ರಭಾರ ಜಿಲ್ಲಾಧಿಕಾರಿ ಕುಮಾರ್ ಅವರು ನೂತನ ಜಿಲ್ಲಾಧಿಕಾರಿಗಳಿಗೆ ಅಧಿಕಾರ ಹಸ್ತಾಂತರಿಸಿ, ಸ್ವಾಗತಿಸಿದರು. ಈ ಸಂದರ್ಭ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಎಂ.ಆರ್. ರವಿ, ಮಂಗಳೂರು ಸಹಾಯಕ ಆಯುಕ್ತ ರೇಣುಕಾ ಪ್ರಸಾದ್, ಜಿ.ಪಂ. ಉಪ ಕಾರ್ಯದರ್ಶಿ ಎನ್.ಆರ್. ಉಮೇಶ್ ಹಾಗೂ ಜಿಲ್ಲಾ ಮಟ್ಟದ ವಿವಿಧ ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು.

Also Read  ಪುತ್ತೂರು: ರೈಲ್ವೆ ಹಳಿಯಲ್ಲಿ ಪ್ರಜ್ಞಾಹೀನ ವ್ಯಕ್ತಿ ಪತ್ತೆ ➤ ವಾರಸುದಾರರಿಗಾಗಿ ಪೊಲೀಸ್ ಮನವಿ

error: Content is protected !!
Scroll to Top