ಬೆಳ್ತಂಗಡಿ: ಅಂಗಡಿ ಮಾಲಕ ನೇಣು ಬಿಗಿದು ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಫೆ. 18. ಬುರ್ಖಾ ಅಂಗಡಿಯೊಂದರ ಮಾಲಕ ನೇಣು ಬಿಗಿದು ಆತ್ಮಹತ್ಯೆಗೈದ ಘಟನೆ ಗುರುವಾರ ಬೆಳಗ್ಗೆ ತಾಲೂಕಿನ ಬಿ.ಸಿ.ರೋಡ್ ನ ಕೈಕಂಬದಲ್ಲಿ ನಡೆದಿದೆ.

ಆತ್ಮಹತ್ಯೆಗೈದವರನ್ನು ಕೈಕಂಬ ಸಮೀಪದ ಪರ್ಲ್ಯ ನಿವಾಸಿ, ಲಿಬಾಸ್ ಬುರ್ಖಾ ಮಳಿಗೆಯ ಮಾಲಕ ಅಬ್ದುಲ್ ರಹ್ಮಾನ್ (36) ಎಂದು ಗುರುತಿಸಲಾಗಿದೆ. ಇವರು ಎಂದಿನಂತೆ ಇಂದೂ ಕೂಡಾ ಅಂಗಡಿಗೆ ತೆರಳಿದ್ದು, ಅಂಗಡಿಯ ಮೇಲಂತಸ್ತಿನಲ್ಲಿರುವ ಕೊಠಡಿಯೊಂದರಲ್ಲಿ ಫ್ಯಾನ್ ಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಮೇಲಂತಸ್ತಿಗೆ ತೆರಳುವ ಮುನ್ನ ಅಂಗಡಿಯ ಕೆಲಸದಾಕೆಯ ಬಳಿ ತನ್ನ ಮೊಬೈಲ್ ಗೆ ಕರೆ ಬಂದರೆ ಸ್ವೀಕರಿಸದಂತೆ ಹೇಳಿ ತೆರಳಿದ್ದು, ಕೆಲವು ಸಮಯದ ಬಳಿಕ ನೋಡಿದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಮೃತರು ಪತ್ನಿ, ಇಬ್ಬರು ಪುತ್ರಿಯರು ಹಾಗೂ ಓರ್ವ ಪುತ್ರನನ್ನು ಅಗಲಿದ್ದಾರೆ. ಸ್ಥಳಕ್ಕೆ ಬಂಟ್ವಾಳ ನಗರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Also Read  ಪುತ್ತೂರು: ಒಂಟಿ ವೃದ್ಧರನ್ನು ಟಾರ್ಗೆಟ್ ಮಾಡಿ ► ಚಿನ್ನಾಭರಣ ಎಗರಿಸುತ್ತಿದ್ದ ಆರೋಪಿಯ ಬಂಧನ

error: Content is protected !!