ಮಂಗಳೂರು- ಬೆಂಗಳೂರು ಹೆದ್ದಾರಿಯಲ್ಲಿ ಟಾಟಾ ಸುಮೋ ಹಾಗೂ ಕ್ವಾಲಿಸ್ ಢಿಕ್ಕಿ ➤ ನಾಲ್ವರು ದುರ್ಮರಣ

(ನ್ಯೂಸ್ ಕಡಬ) newskadaba.com ಹಾಸನ, ಫೆ. 21. ಟಾಟಾ ಸುಮೋ ಹಾಗೂ ಕ್ವಾಲಿಸ್ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ನಾಲ್ವರು ಮೃತಪಟ್ಟ ಘಟನೆ ಬೆಂಗಳೂರು- ಮಂಗಳೂರು ಹೆದ್ದಾರಿಯಲ್ಲಿ ನಡೆದಿದೆ.


ರಾ.ಹೆದ್ದಾರಿಯ ಶಾಂತಿಗ್ರಾಮದ ಕೆಂಚಟ್ಟಹಳ್ಳಿ ಎಂಬಲ್ಲಿ ಟಾಟಾ ಸುಮೋಗೆ ಹಿಂದಿನಿಂದ ಬಂದ ಕ್ವಾಲಿಸ್ ಢಿಕ್ಕಿ ಹೊಡೆದಿದ್ದು, ಪರಿಣಾಮ ನಾಲ್ವರು ಮೃತಪಟ್ಟು, 10 ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಹಾಸನದ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀನಿವಾಸ್ ಗೌಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Also Read  ನವೆಂಬರ್ ನಿಂದ ನಮ್ಮ ಮೆಟ್ರೋ ಪ್ರಯಾಣ ದರ ಶೇ 20ಕ್ಕೆ ಹೆಚ್ಚಳ..!?

error: Content is protected !!
Scroll to Top