ಸುಬ್ರಹ್ಮಣ್ಯ: ಭಾರೀ ಗಾಳಿ ಮಳೆಗೆ ರಸ್ತೆಗೆ ಉರುಳಿ ಬಿದ್ದ ಮರ ➤ ಕೆಲಕಾಲ ಸಂಚಾರದಲ್ಲಿ ವ್ಯತ್ಯಯ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಫೆ. 22. ಭಾರೀ ಗಾಳಿ ಸಹಿತ ಮಳೆ ಸುರಿದ ಪರಿಣಾಮ ಉಪ್ಪಿನಂಗಡಿ – ಕಡಬ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಬಿಳಿನೆಲೆ ಸಿ ಪಿ ಸಿ ಅರ್ ಐ ಬಳಿ ಹೆದ್ದಾರಿಗೆ ಅಡ್ಡವಾಗಿ ಮರವೊಂದು ಉರುಳಿ ಬಿದ್ದು ಒಂದು ಗಂಟೆಗೂ ಹೆಚ್ಚು ಕಾಲ ವಾಹನ ಸಂಚಾರಕ್ಕೆ ತಡೆ ಉಂಟಾಯಿತು.

ಈ ಕುರಿತು ಸ್ಥಳಿಯ ಮುಂದಾಳು ರಮೇಶ್ ವಾಲ್ತಾಜೆ ಎಂಬವರು ಸಂಬಂದಪಟ್ಟವರಿಗೆ ನೀಡಿದ ಮಾಹಿತಿಯಂತೆ ಸ್ಥಳಕ್ಕೆ ಭೇಟಿ ನೀಡಿದ ಮೆಸ್ಕಾಂ, ಅರಣ್ಯ ಹಾಗೂ ಪೊಲೀಸ್ ಇಲಾಖಾ ಸಿಬ್ಬಂದಿಗಳು ಸ್ಥಳಿಯರ ಸಹಕಾರದೊಂದಿಗೆ ತುರ್ತು ಕಾರ್ಯಚರಣೆ ನಡೆಸಿ ಮರ ತೆರವುಗೊಳಿದರು. ಘಟನೆಯಲ್ಲಿ ವಿದ್ಯುತ್ ಕಂಬಗಳಿಗೆ ಹಾನಿಯಾಗಿದೆ.

error: Content is protected !!

Join the Group

Join WhatsApp Group