ಆರೆಸ್ಸೆಸ್ ಹಾಗೂ ಎಸ್ಡಿಪಿಐ ನಡುವೆ ಘರ್ಷಣೆ ➤ 8 ಮಂದಿಯ ಬಂಧನ

(ನ್ಯೂಸ್ ಕಡಬ) newskadaba.com ಕೇರಳ, ಫೆ. 25.‌ ಆರೆಸ್ಸೆಸ್ ಕಾರ್ಯಕರ್ತನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಡಿಪಿಐನ 8 ಮಂದಿ ಕಾರ್ಯಕರ್ತರನ್ನು ಬಂಧಿಸಿದ ಘಟನೆ ನಡೆದಿದೆ.

ಬುಧವಾರ ರಾತ್ರಿ ಚೆರ್ತಲಾ ಸಮೀಪದ ನಾಗಂಕುಲಂಗರದಲ್ಲಿ ನಡೆದ ಎರಡು ಗುಂಪುಗಳ ನಡುವಿನ ಘರ್ಷಣೆಯಲ್ಲಿ ಆರೆಸ್ಸೆಸ್ ಕಾರ್ಯಕರ್ತ ನಂದು(23) ಎಂಬಾತ ಮೃತಪಟ್ಟಿದ್ದು, ಅಲ್ಲದೇ ಎಸ್ಡಿಪಿಐ ಹಾಗೂ ಆರೆಸ್ಸೆಸ್ ನ ಆರು ಜನರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಅಲಪ್ಪುಳ ಹಾಗೂ ಎರ್ನಾಕುಲಂನ ವಿವಿಧ ಆಸ್ಪತ್ರೆಗಳಲ್ಲಿ ಸೇರಿಸಲಾಗಿದೆ. ಆರ್ ಎಸ್ ಎಸ್ ಸಂಘಟನೆಗೆ ಸೇರಿದ ಓರ್ವ ಕಾರ್ಯಕರ್ತನ ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Also Read  ?ಮಂಗಳೂರು ವಿವಿಯಲ್ಲಿ ಕುಲಪತಿ ಸ್ಥಾನ ಕೊಡಿಸುವುದಾಗಿ ಭಾರೀ ಹಣ ವಂಚನೆ ➤ ಆರೋಪಿಯ ಬಂಧನ

error: Content is protected !!
Scroll to Top