(ನ್ಯೂಸ್ ಕಡಬ) newskadaba.com ತಮಿಳುನಾಡು, ಫೆ. 25. ಕಳೆದ ವರ್ಷ ಕೊರೋನಾ ವೈರಸ್ ಭೀತಿಯಿಂದಾಗಿ 1ರಿಂದ 9ನೇ ತರಗತಿವರೆಗೆ ಪರೀಕ್ಷೆ ನಡೆಸದೆ ಹಾಗೆಯೇ ಪಾಸು ಮಾಡಲಾಗಿತ್ತು.

ಇದೀಗ ಕೊರೋನಾ ಎರಡನೇ ಅಲೆ ಆರಂಭವಾಗಿದ್ದು, ತಮಿಳುನಾಡು ರಾಜ್ಯ ಸರ್ಕಾರವು ಕೊರೋನಾ ಭೀತಿ ಹೆಚ್ಚಿರುವುದರಿಂದ ಮಕ್ಕಳ ಆರೋಗ್ಯದ ಹಿತದೃಷ್ಟಿಯಿಂದ ಪ್ರಸಕ್ತ ಸಾಲಿನ 9, 10 ಮತ್ತು 11 ನೇ ತರಗತಿ ವಿದ್ಯಾರ್ಥಿಗಳಿಗೆ ಯಾವುದೇ ಪರೀಕ್ಷೆ ನಡೆಸದೆ ಪಾಸು ಮಾಡಲು ಮುಂದಾಗಿದೆ ಎಂದು ತಮಿಳುನಾಡು ಸಿಎಂ ಎಡಪ್ಪಾಡಿ ಕೆ.ಪಳನಿಸ್ವಾಮಿ ಈ ಕುರಿತು ಮಹತ್ವದ ನಿರ್ಧಾರವೊಂದನ್ನು ಪ್ರಕಟಿಸಿದ್ದಾರೆ.













