ಶಿರಾಡಿ: ಪೊಲೀಸ್ ಬಸ್ ಗೆ ಐರಾವತ ಬಸ್ ಢಿಕ್ಕಿ ➤ ಪ್ರಯಾಣಿಕರು ಅಪಾಯದಿಂದ ಪಾರು

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಫೆ.27. ಕೆಎಸ್ಸಾರ್ಟಿಸಿ ವೋಲ್ವೋ ಬಸ್ಸೊಂದು ಓವರ್ ಟೇಕ್ ಮಾಡುವ ಭರದಲ್ಲಿ ಪೊಲೀಸ್ ಬಸ್ಸಿಗೆ ಢಿಕ್ಕಿ ಹೊಡೆದ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಶಿರಾಡಿ ಘಾಟ್ ನ ಕೆಂಪುಹೊಳೆ ಎಂಬಲ್ಲಿ ಶನಿವಾರ ಅಪರಾಹ್ನ ನಡೆದಿದೆ.

ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ವೋಲ್ವೋ ಬಸ್ ಕೆಂಪುಹೊಳೆ ಸಮೀಪದ ತಿರುವೊಂದರಲ್ಲಿ ಓವರ್ ಟೇಕ್ ಮಾಡುತ್ತಿದ್ದ ಸಂದರ್ಭದಲ್ಲಿ ಎದುರಿನಿಂದ ಬರುತ್ತಿದ್ದ ಪೊಲೀಸ್ ಬಸ್ ಗೆ ಢಿಕ್ಕಿಯಾಗಿದೆ. ಘಟನೆಯಲ್ಲಿ ಎರಡೂ ವಾಹನಗಳು ಜಖಂಗೊಂಡಿವೆ.

Also Read  ಕರಾವಳಿ ಉತ್ಸವದಲ್ಲಿ ಸಾಂಪ್ರದಾಯಿಕತೆ, ಸಂಸ್ಕೃತಿ ಅನಾವರಣ- ಜಿಲ್ಲಾಧಿಕಾರಿ

 

 

error: Content is protected !!
Scroll to Top