? ಕೊಣಾಜೆ: ಮಹಿಳೆಯ ಸರ ಎಳೆದು ಪರಾರಿಯಾಗಿದ್ದ ಆರೋಪಿ ಅರೆಸ್ಟ್

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ. 02. ಮಹಿಳೆಯ ಸರ ಎಳೆದು ಪರಾರಿಯಾಗಿದ್ದ ಆರೋಪಿಯೋರ್ವನನ್ನು ಬಂಧಿಸುವಲ್ಲಿ ಕೊಣಾಜೆ ಪೊಲೀಸರು ಯಶಸ್ವಿಯಾಗಿದ್ದಾರೆ.

ಬಂಧಿತನನ್ನು ಪಾನೇಲ ನಿವಾಸಿ ಇರ್ಷಾದ್ (23) ಎಂದು ಗುರುತಿಸಲಾಗಿದೆ. ಆರೋಪಿಯು ಬೋಳಿಯಾರ್ ನಿವಾಸಿ ಶಾಂಭವಿ ಎಂಬವರು ತೋಟದಿಂದ ಸೋಗೆ ತರುತ್ತಿದ್ದ ವೇಳೆ ಹಿಂದಿನಿಂದ ಬಂದು ಸರ ಎಳೆದು ಪರಾರಿಯಾಗಿದ್ದ. ಈ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು ದಾಳಿ ನಡೆಸಿ ಇರ್ಷಾದ್ ಎಂಬಾತನನ್ನು ಬಂಧಿಸಿದ್ದಾರೆ.

Also Read  ರಾಜ್ಯದಲ್ಲಿ ಮತ್ತೆ 18 ಮಂದಿಗೆ ಕೊರೋನ ಸೋಂಕು ದೃಢ: 400ರ ಗಟಿ ದಾಟಿದ ಸೋಂಕಿತರ ಸಂಖ್ಯೆ

error: Content is protected !!
Scroll to Top