ವಿದ್ಯಾರ್ಥಿ ವೇತನ ವಂಚಿತ ವಿದ್ಯಾರ್ಥಿಗಳ ನ್ಯಾಯಕ್ಕಾಗಿ NSUI ಸುಳ್ಯ ಅಭಿಯಾನ

(ನ್ಯೂಸ್ ಕಡಬ) newskadaba.com ಸುಳ್ಯ, ಮಾ. 07. 2019-20ನೇ ಸಾಲಿನ ವಿದ್ಯಾರ್ಥಿ ವೇತನ ವಂಚಿತ ವಿದ್ಯಾರ್ಥಿಗಳ ವಿಶೇಷ ಗಣತಿಯನ್ನು ಮಾಡಿ ವಿದ್ಯಾರ್ಥಿ ಗಳಿಗೆ ನ್ಯಾಯ ಒದಗಿಸುವ ಉದ್ದೇಶದಿಂದ NSUI ಸುಳ್ಯ ಅಭಿಯಾನ ಕೈಗೊಂಡಿದೆ.

ವಿದ್ಯಾರ್ಥಿ ವೇತನ ದೊರೆಯದ ವಿದ್ಯಾರ್ಥಿ ಈ ಸರ್ವೆಯಲ್ಲಿ ಬಾಗವಹಿಸಿ ತಮ್ಮ ಮಾಹಿತಿಯನ್ನು ನೋಂದಾವಣೆ ಮಾಡಲು ಕೋರಲಾಗಿದೆ. ಈ ಎಲ್ಲಾ ಮಾಹಿತಿಯನ್ನು NSUI ಆಯಾ ಇಲಾಖೆಗಳಿಗೆ ಸಲ್ಲಿಸಿ ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸುವಂತೆ ಆಗ್ರಹಿಸಲಿದೆ. ಈ ಅಭಿಯಾನದ ZOOM ಮೀಟಿಂಗ್ ನಲ್ಲಿ ಜಿಲ್ಲಾಧ್ಯಕ್ಷ ಸವಾದ್ ಸುಳ್ಯ ಚಾಲನೆ ನೀಡಿದರು. ಈ ವೇಳೆ ಸುಳ್ಯ NSUI ಮುಖಂಡರುಗಳಾದ ಕೀರ್ತನ್ ಗೌಡ ಕೊಡಪಾಲ, ಆಶಿಕ್ ಅರಂತೋಡ್, ಆಸಿಫ್‌ ಬಾಳಿಲ, ಧನುಷ್ ಕುಕ್ಕೆಟ್ಟಿ, ದರ್ಶನ್, ರಕ್ಷಿತ್, ಶಹಾಲ್, ಯಶವಂತ್, ಪವನ ಅಂಬೆಕಲ್ಲು, ಭರತ್ ಅಡ್ಯಡ್ಕ, ಸುಜಿತ್, ಮಿಥುನ್ ಸುಳ್ಯ, ಮೋಹನ್ ಹಾಗು ಸಮಿತಿ ಸದಸ್ಯರು ಉಪಸ್ಥಿತರಿದ್ದರು.

error: Content is protected !!

Join the Group

Join WhatsApp Group