BCM ಹಾಸ್ಟೆಲ್ ಅಲಾಟ್ಮೆಂಟ್ ಪ್ರಕ್ರಿಯೆ ಶೀಘ್ರವಾಗಿ ನಡೆಸುವಂತೆ NSUI ಸುಳ್ಯ ವತಿಯಿಂದ ಮನವಿ

(ನ್ಯೂಸ್ ಕಡಬ) newskadaba.com ಸುಳ್ಯ, ಮಾ. 07. NSUI ಕ್ಯಾಂಪಸ್ ಮೀಟ್ ಸಂದರ್ಭದಲ್ಲಿ ಅಹವಾಲು ಸಲ್ಲಿಸಿದ್ದ ವಿದ್ಯಾರ್ಥಿಗಳ ಬೇಡಿಕೆಯ ಮೇರೆಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧೀನದಲ್ಲಿರುವ ಹಾಸ್ಟೆಲ್ ನಲ್ಲಿ ಈವರೆಗೂ ಅಲಾಟ್ಮೆಂಟ್ ನಡೆಯದಿರುವ ಬಗ್ಗೆ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ವಿಚಾರಿಸಲಾಯಿತು.

ಈ ಶೈಕ್ಷಣಿಕ ವರ್ಷದ ಮೆಟ್ರಿಕ್ ನಂತರದ ವಿದ್ಯಾರ್ಥಿಗಳ ಹಾಸ್ಟೆಲ್ ಸಂಬಂದಿಸಿದ ಅಲೋಟ್ ಮೆಂಟ್ ಈವರೆಗೂ ನಡೆಯದೇ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಈಗಾಗಲೇ ಶೈಕ್ಷಣಿಕ ವರ್ಷದ ಅರ್ಧ ಭಾಗ ಮುಕ್ತಾಯವಾಗುವ ಹಂತದಲ್ಲಿದೆ. ಆದುದರಿಂದ ವಿದ್ಯಾರ್ಥಿಗಳ ಈ ಸಮಸ್ಯೆಗಳನ್ನು ಶೀಘ್ರವಾಗಿ ಪರಿಹರಿಸಲು ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ ಸುಳ್ಯ ವಿಧಾನಸಭಾ ಕ್ಷೇತ್ರದ ವತಿಯಿಂದ ಮನವಿ ಸಲ್ಲಿಸಿದರು. ವಾರದೊಳಗೆ ಸಮಸ್ಯೆ ಪರಿಹಾರವಾಗಲಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಸುಳ್ಯ ಎನ್ ಎಸ್ ಯು ಐ ನೂತನ ಅಧ್ಯಕ್ಷರಾದ ಕೀರ್ತನ್ ಗೌಡ ಕೊಡಪಾಲ, ಆಶಿಕ್ ಅರಂತೋಡು, ಆಸಿಫ್ ಬಾಳಿಲ, ಪವನ್ ಅಂಬೆಕಲ್ಲು, ಯಶವಂತ್ ಅಡ್ಯಡ್ಕ, ರಿಯಾಜ್ ಸುಳ್ಯ, ಧನುಷ್ ಕುಕ್ಕೆಟಿ ಮೊದಲಾದವರು ಉಪಸ್ಥಿತರಿದ್ದರು.

Also Read  ಮಂಗಳೂರು ವಿಮಾನ ನಿಲ್ದಾಣದಲ್ಲಿ ಅನುಮಾನಸ್ಪದ ಬ್ಯಾಗ್ ಪತ್ತೆ

error: Content is protected !!
Scroll to Top