ಕೆಂಜಾಳ: ಕಾರು ಮರಕ್ಕೆ ಢಿಕ್ಕಿ ಹೊಡೆದ ಪ್ರಕರಣ ► ಗಾಯಾಳು ಓರ್ವ ಮೃತ್ಯು

(ನ್ಯೂಸ್ ಕಡಬ) newskadaba.com ಕಡಬ, ಅ.21. ಗುಂಡ್ಯ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕೆಂಜಾಳ ಎಂಬಲ್ಲಿ ಕಾರೊಂದು ಮರಕ್ಕೆ ಢಿಕ್ಕಿ ಹೊಡೆದ ಪರಿಣಾಮ ಓರ್ವ ಮೃತಪಟ್ಟು ನಾಲ್ವರು ಗಾಯಗೊಂಡ ಘಟನೆ ಶನಿವಾರದಂದು ನಡೆದಿದೆ.

ಬೆಂಗಳೂರು ವಿಘ್ನೇಶ್ವರ ನಗರ ನಿವಾಸಿಗಳಿದ್ದ ತಂಡ ಧರ್ಮಸ್ಥಳ, ಸೌತಡ್ಕ ದೇವರ ದರ್ಶನ ಮುಗಿಸಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ತೆರಳುತ್ತಿದ್ದ ಸಂದರ್ಭ ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿಯಲ್ಲಿನ ಮರಕ್ಕೆ ಢಿಕ್ಕಿ ಹೊಡೆದುದರಿಂದ ಈ ದುರ್ಘಟನೆ ಸಂಭವಿಸಿದೆ. ಘಟನೆಯಲ್ಲಿ ವೆಂಕಟೇಶ್ ಎನ್ನುವವರು ಮೃತಪಟ್ಟು, ಮಾಲಿಂಗ, ರಮೇಶ್, ಸತೀಶ್, ಚಿಕ್ಕಣ್ಣ ಗಾಯಗೊಂಡಿದ್ದಾರೆ‌. ಈ ಬಗ್ಗೆ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Also Read  ಶಾಲೆಯಲ್ಲಿ ರ‍್ಯಾಗಿಂಗ್ ➤ ಬೇಸತ್ತು ಬಾಲಕಿ ಆತ್ಮಹತ್ಯೆ

error: Content is protected !!
Scroll to Top