ಗುಂಡ್ಯ: ಬೈಕ್ – ಸ್ಕಾರ್ಪಿಯೋ ಢಿಕ್ಕಿ ► ಬೈಕ್ ಸವಾರ ಮೃತ್ಯು

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಅ.22. ಬೈಕ್ ಮತ್ತು ಸ್ಕಾರ್ಪಿಯೊ ಕಾರು ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಗುಂಡ್ಯ ಚೆಕ್ ಪೊಸ್ಟ್ ಬಳಿ ಭಾನುವಾರದಂದು ನಡೆದಿದೆ.

ಮೃತ ಸವಾರನನ್ನು ತುಮಕೂರು ನಿವಾಸಿ ನವೀನ್ ಕುಮಾರ್ ಎಂದು ಗುರುತಿಸಲಾಗಿದೆ. ನವೀನ್ ಕುಮಾರ್‌ರವರು ಧರ್ಮಸ್ಥಳದಿಂದ ತುಮಕೂರಿಗೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

error: Content is protected !!
Scroll to Top