ರಾಜ್ಯದಲ್ಲಿ ದಿನೇದಿನೇ ಏರಿಕೆಯತ್ತ ಕೊರೋನಾ ಸೋಂಕು ➤ ಸಾರ್ವಜನಿಕರು ಎಚ್ಚೆತ್ತುಕೊಳ್ಳುವಂತೆ ಡಾ| ಸುಧಾಕರ್ ಸೂಚನೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಮಾ.21. ರಾಜ್ಯದಲ್ಲಿ ಕೊರೋನಾ ಸೋಂಕಿನ ಪ್ರಮಾಣ ದಿನೇದಿನೇ ಹೆಚ್ಚುತ್ತಿದ್ದು, ಜನಸಾಮಾನ್ಯರು ಎಚ್ಚೆತ್ತುಕೊಂಡು ಕೋವಿಡ್ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಎಚ್ಚರಿಕೆ ನೀಡಿದ್ದಾರೆ.

ಸಭೆ, ಸಮಾರಂಭಗಳನ್ನು ಕಡಿಮೆಗೊಳಿಸುವಂತೆ ಸೂಚಿಸಿದ ಅವರು ಕೊರೋನಾ ಸೋಂಕು ಯಾರಿಗೂ ರಿಯಾಯಿತಿ ನೀಡಲ್ಲ. ಸಾರ್ವಜನಿಕರು ಈ ಬಗ್ಗೆ ಎಚ್ಚರಿಕೆಯಿಂದಿದ್ದು ಅನಗತ್ಯ ಓಡಾಟದಿಂದ ದೂರವಿರಬೇಕು. ಸಾಮಾಜಿಕ ಅಂತರ, ಮಾಸ್ಕ್ ಧರಿಸುವುದನ್ನು ಕಡ್ಡಾಯವಾಗಿ ಪಾಲಿಸಬೇಕೆಂದು ಕರೆ ನೀಡಿದರು.

 

 

 

Scroll to Top