ಪುತ್ತೂರು: ಪಿಯುಸಿ ವಿದ್ಯಾರ್ಥಿನಿ ಹೃದಯಾಘಾತದಿಂದ ಮೃತ್ಯು

(ನ್ಯೂಸ್ ಕಡಬ) newskadaba.com ಪುತ್ತೂರು, ಮಾ.23. ಪಿಯುಸಿ ವಿದ್ಯಾರ್ಥಿನಿ ಹೃದಯಾಘಾತದಿಂದ ಮೃತಪಟ್ಟ ಘಟನೆ ಮಂಗಳವಾರ ಬೆಳಿಗ್ಗೆ ಪುತ್ತೂರಿನಲ್ಲಿ ನಡೆದಿದೆ.

ಮೃತರನ್ನು ಪುತ್ತೂರಿನ ವಿವೇಕಾನಂದ ಕಾಲೇಜಿನ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ, ಪುತ್ತೂರು ತಾಲೂಕು ಬೆಳ್ಳಿಪ್ಪಾಡಿ ಕುಂಡಾಪು ನಿವಾಸಿ ಪದ್ಮ ಪಕ್ಕಳ ಎಂಬವರ ಪುತ್ರಿ ಶ್ರೇಯಾ ಪಕ್ಕಳ (16) ಎಂದು ಗುರುತಿಸಲಾಗಿದೆ. ಆರೋಗ್ಯದಿಂದಿದ್ದ ಶ್ರೇಯಾಳಿಗೆ ಇಂದು ಬೆಳಿಗ್ಗೆ ಹಠಾತ್ತನೆ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಪುತ್ತೂರಿನ ಆಸ್ಪತ್ರೆಗೆ ಕರೆತರಲಾಯಿತಾದರೂ ಅದಾಗಲೇ ಹೃದಯಾಘಾತಕ್ಕೆ ಒಳಗಾಗಿ ಮೃತಪಟ್ಟಿದ್ದಾರೆ.

 

 

error: Content is protected !!

Join the Group

Join WhatsApp Group