?ಹಿರಿಯಡ್ಕ: ಯುವಕ ನೇಣು ಬಿಗಿದು ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಹಿರಿಯಡ್ಕ, ಮಾ. 27. ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಹಿರಿಯಡಕ ಕೊಂಡಾಡಿ ಭಜನೆ ಕಟ್ಟೆ ಎಂಬಲ್ಲಿ ಶನಿವಾರದಂದು ನಡೆದಿದೆ.

 

ಆತ್ಮಹತ್ಯೆ ಮಾಡಿಕೊಂಡವರನ್ನು ದೇವೇಂದ್ರ ಆಚಾರ್ಯ( ಮುನ್ನ) ಎಂದು ಗುರುತಿಸಲಾಗಿದೆ. ಇವರು ವೃತ್ತಿಯಲ್ಲಿ ಬಡಗಿಯಾಗಿದ್ದು, ಕೊರೋನಾ ಲಾಕ್ ಡೌನ್ ಬಳಿಕ ಸರಿಯಾಗಿ ಕೆಲಸವಿಲ್ಲದೆ ಆರ್ಥಿಕ ಸಂಕಷ್ಟ ಉಂಟಾಗಿ, ಖಿನ್ನತೆಗೆ ಒಳಗಾಗಿದ್ದರು. ಇದೇ ಕಾರಣದಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

 

error: Content is protected !!
Scroll to Top