ಉಪ್ಪಿನಂಗಡಿ: ಪೇಪರ್ ಸಾಗಾಟದ ಓಮ್ನಿ ಪಾದಚಾರಿಗೆ ಢಿಕ್ಕಿ ➤ ವ್ಯಕ್ತಿ ಗಂಭೀರ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಮಾ. 30. ಪೇಪರ್ ಸಾಗಾಟದ ಓಮ್ನಿ ಕಾರೊಂದು ಅಪರಿಚಿತ ವ್ಯಕ್ತಿಗೆ ಢಿಕ್ಕಿ ಹೊಡೆದ ಪರಿಣಾಮ ವ್ಯಕ್ತಿ ಗಂಭೀರ ಗಾಯಗೊಂಡ ಘಟನೆ ಉಪ್ಪಿನಂಗಡಿ ಸಮೀಪದ 34 ನೆಕ್ಕಿಲಾಡಿಯಲ್ಲಿ ಮಂಗಳವಾರ ಮುಂಜಾನೆ ನಡೆದಿದೆ.

ಬಿ.ಸಿ.ರೋಡ್ ಕಡೆಯಿಂದ ಉಪ್ಪಿನಂಗಡಿ ಕಡೆಗೆ ಪತ್ರಿಕೆ ಸಾಗಾಟ ಮಾಡುತ್ತಿದ್ದ ಓಮ್ನಿ ಕಾರು ಮುಂಜಾನೆ 5:20ರ ಸುಮಾರಿಗೆ 34 ನೆಕ್ಕಿಲಾಡಿ ಎಂಬಲ್ಲಿ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಪಾದಚಾರಿಯೋರ್ವರಿಗೆ ಢಿಕ್ಕಿ ಹೊಡೆದಿದೆ. ಗಂಭೀರ ಗಾಯಗೊಂಡು ರಸ್ತೆ ಬದಿ ಬಿದ್ದಿದ್ದ ಅವರನ್ನು ಉಪ್ಪಿನಂಗಡಿ ಪೊಲೀಸ್ ಸಿಬ್ಬಂದಿ ಪ್ರತಾಪ್ ಹಾಗೂ ಹೈವೆ ಪೆಟ್ರೋಲ್ ನ ಪೊಲೀಸರು ತಕ್ಷಣ ಚಿಕಿತ್ಸೆಗಾಗಿ ಪುತ್ತೂರಿಗೆ ಕಳುಹಿಸಿದ್ದಾರೆ. ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ. ಅಪಘಾತವೆಸಗಿದ ಓಮ್ನಿ ಕಾರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿರುವುದಾಗಿ ತಿಳಿದು ಬಂದಿದೆ.

Also Read  ಕನ್ನಡದ ಹಿರಿಯ ಸಾಹಿತಿ ಚನ್ನವೀರ ಕಣವಿ ಇನ್ನಿಲ್ಲ....!

error: Content is protected !!
Scroll to Top