ಗ್ಯಾಸ್ ಟ್ಯಾಂಕರ್ – ಕಾರು ಮಧ್ಯೆ ಮುಖಾಮುಖಿ ಢಿಕ್ಕಿ ➤ ನಿಂತಿಕಲ್ಲಿನಿಂದ ತೆರಳುತ್ತಿದ್ದ ಆರು ಮಂದಿ ಗಂಭೀರ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಮಾ.30. ಅನಿಲ ಸಾಗಾಟದ ಟ್ಯಾಂಕರೊಂದು ಮಾರುತಿ ಇಕೋ ಕಾರಿಗೆ ಢಿಕ್ಕಿ ಹೊಡೆದ ಪರಿಣಾಮ ಆರು ಮಂದಿ ಗಂಭೀರ ಗಾಯಗೊಂಡ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬಿ.ಸಿ.ರೋಡ್ ಸಮೀಪದ ಪಾಣೆಮಂಗಳೂರು ಎಂಬಲ್ಲಿ ಮಂಗಳವಾರದಂದು ನಡೆದಿದೆ.

ಗಂಭೀರ ಗಾಯಗೊಂಡವರನ್ನು ಮುಲ್ಕಿ ಸಮೀಪದ ಕಿನ್ನಿಗೋಳಿ ಐಕಳ ನಿವಾಸಿಗಳೆಂದು ಗುರುತಿಸಲಾಗಿದೆ. ಗಾಯಾಳುಗಳು ಸುಳ್ಯ ತಾಲೂಕಿನ ನಿಂತಿಕಲ್ಲು ಎಂಬಲ್ಲಿ ಕೊರಗಜ್ಜ ದೈವದ ನರ್ತನ ಸೇವೆ ಸಲ್ಲಿಸಿ ವಾಪಸಾಗುತ್ತಿದ್ದರು ಎಂದು ತಿಳಿದುಬಂದಿದೆ. ಇವರಿದ್ದ ಕಾರು ಪಾಣೆಮಂಗಳೂರು ಸಮೀಪಿಸುತ್ತಿದ್ದಂತೆ ವಿರುದ್ಧ ದಿಕ್ಕಿನಿಂದ ಬಂದ ಗ್ಯಾಸ್ ಟ್ಯಾಂಕರ್ ಕಾರಿಗೆ ಮುಖಾಮುಖಿ ಢಿಕ್ಕಿ ಹೊಡೆದು ಈ ಅವಘಡ‌ ಸಂಭವಿಸಿದೆ. ಢಿಕ್ಕಿಯಾದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಸ್ಥಳಕ್ಕೆ ಬಂಟ್ವಾಳ ಸಂಚಾರಿ ಠಾಣೆಯ ಎಸ್‌ಐ ರಾಜೇಶ್ ಮತ್ತು ತಂಡ ಭೇಟಿ ನೀಡಿ ಪರಿಶೀಲಿಸಿದ್ದಾರೆ.

Also Read  ವಿಟ್ಲ: ದೇವಸ್ಥಾನದಲ್ಲಿ ಕಳವು ಪ್ರಕರಣ – ಆರೋಪಿಯ ಬಂಧನ ➤ 3 ವರ್ಷಗಳಲ್ಲಿಆರೋಪಿಯ ವಿರುದ್ದ ಜಿಲ್ಲೆಯ ವಿವಿಧ ಠಾಣೆಗಳಲ್ಲಿ 13 ಪ್ರಕರಣ ದಾಖಲು

 

 

 

error: Content is protected !!
Scroll to Top