? ಮಂಗಳೂರು ಮೂಲದ ಉದ್ಯಮಿ ವಿಜಯಪುರದಲ್ಲಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ವಿಜಯಪುರ, ಎ. 01. ಇಲ್ಲಿನ ಇಂಡಿ ಎಂಬಲ್ಲಿ ಅಮರ್ ಹೆಸರಿನ ಹೋಟೆಲ್ ನಡೆಸುತ್ತಿದ್ದ ಉದ್ಯಮಿಯೋರ್ವರು ಕೊರೋನಾ ವೈರಸ್ ನಿಂದಾಗಿ ಹೋಟೆಲ್ ಉದ್ಯಮದಲ್ಲಿ ಭಾರಿ ನಷ್ಟ ಅನುಭವಿಸಿದ ಕಾರಣ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡವರನ್ನು ಮಂಗಳೂರು ಮೂಲದ ಗಣೇಶ್ ಎಂದು ಗುರುತಿಸಲಾಗಿದೆ. ಇವರು ಹೋಟೆಲ್ ನಡೆಸಲು 30 ಲಕ್ಷ ರೂ. ಸಾಲ ಮಾಡಿಕೊಂಡಿದ್ದು, ಇದರ ಬಡ್ಡಿ ಕಟ್ಟಲಾಗದೇ ಒದ್ದಾಡುತ್ತಿದ್ದರು. ಅಲ್ಲದೇ ಕೊರೋನಾದಿಂದಾಗಿ ಹೋಟೆಲ್​​ ಕೂಡಾ ಸರಿಯಾಗಿ ನಡೆಯದೆ ಚಿಂತೆಗೀಡಾಗಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಸ್ಥಳಕ್ಕೆ ಇಂಡಿ ನಗರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Also Read  ಬೈತಡ್ಕ: ಸಾರ್ವಜನಿಕರ ಸಹಾಯದಿಂದ ಹೊಳೆಗೆ ಬಿದ್ದಿದ್ದ ಕಾರನ್ನು ಮೇಲಕ್ಕೆತ್ತಿದ ಅಧಿಕಾರಿಗಳು ➤ ಕಾರಿನಲ್ಲಿದ್ದ ಇಬ್ಬರು ನೀರುಪಾಲು

error: Content is protected !!
Scroll to Top