ಇಂದಿರಾ ಕ್ಯಾಂಟೀನ್ ಉಪಹಾರದಲ್ಲಿ ಜಿರಳೆ ಹಾಕಿದ್ದ ಪ್ರಕರಣ ► ಇಬ್ಬರು ಪೊಲೀಸ್ ವಶಕ್ಕೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ.23. ಕಳೆದ ಎರಡು ದಿನಗಳಿಂದ ಭಾರೀ ಸುದ್ದಿಯಾಗಿದ್ದ ಇಂದಿರಾ ಕ್ಯಾಂಟೀನ್ ಆಹಾರದಲ್ಲಿ ಜಿರಲೆ ಸಿಕ್ಕ ಆರೋಪ ಶುದ್ಧ ಸುಳ್ಳು ಎಂಬುದು ಇದೀಗ ಬಹಿರಂಗವಾಗಿದೆ ಹಾಗೂ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಮಾಕ್ಷಿಪಾಳ್ಯ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.

ಇಂದಿರಾ ಕ್ಯಾಂಟೀನ್‌ನಲ್ಲಿನ ಅಳವಡಿಸಲಾದ ಸಿಸಿಟಿವಿ ದೃಶ್ಯಾವಳಿ ಪರಿಶೀಲಿಸಿದ ಬಳಿಕ ಆರೋಪಿಗಳೇ ಉದ್ದೇಶಪೂರ್ವಕವಾಗಿ ಆಹಾರದಲ್ಲಿ ಜಿರಳೆ ಹಾಕಿರುವುದು ಕಂಡು ಬಂದಿದೆ.

ಆಟೋ ಡ್ರೈವರ್ ಆಗಿರುವ ಹೇಮಂತ್ ಮತ್ತು ದೇವರಾಜ್ ಬಂಧಿತ ಆರೋಪಿಗಳು. ಕಾಮಾಕ್ಷಿಪಾಳ್ಯದ ನಿವಾಸಿಗಳಾದ ಈ ಇಬ್ಬರೂ ಪ್ರಚಾರಕ್ಕಾಗಿ ಉಪಹಾರದಲ್ಲಿ ಜಿರಳೆ ಹಾಕಿರುವುದಾಗಿ ಪೊಲೀಸ್ ವಿಚಾರಣೆ ವೇಳೆ ಒಪ್ಪಿಕೊಂಡಿದ್ದಾರೆ.

ಅಕ್ಟೋಬರ್ 20ರಂದು ರಾಜರಾಜೇಶ್ವರಿನಗರದ ಕೊಟ್ಟಿಗೆಪಾಳ್ಯದ ಇಂದಿರಾ ಕ್ಯಾಂಟೀನ್‍ನಲ್ಲಿ ಒಂದೇ ದಿನದಲ್ಲಿ ರೈಸ್‍ಬಾತ್‍ನಲ್ಲಿ ಎರಡೆರೆಡು ಜಿರಳೆ ಸಿಕ್ಕಿತ್ತು. ಜಿರಲೆ ಸಿಕ್ಕಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.

Also Read  ಮಾದಕ ವಸ್ತುಗಳ ಜಾಲದಿಂದ ಪಾರಾಗಲು ಸ್ವಯಂ ಜಾಗೃತಿ ಅಗತ್ಯ

ಈ ಸಂಬಂಧ ಬಿಬಿಎಂಪಿ ಮೇಯರ್ ಸಂಪತ್ ಕುಮಾರ್ ಪ್ರತಿಕ್ರಿಯಿಸಿ, ಇಂದಿರಾ ಕ್ಯಾಂಟೀನ್ ಹೆಸರು ಹಾಳು ಮಾಡುವ ಉದ್ದೇಶದಿಂದಲೇ ಜಿರಳೆ ರಾಮಾಯಣ ಸೃಷ್ಟಿಸಿದ್ದಾರೆ. ಈ ಕುರಿತು ತನಿಖೆಯನ್ನು ನಡೆಸಿ ಸತ್ಯಾಂಶವನ್ನು ಹೊರತರುತ್ತೇವೆ ಎಂದು ತಿಳಿಸಿದ್ದರು.

 

error: Content is protected !!
Scroll to Top