ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಧರ್ಮಸ್ಥಳ ಮಂಜುನಾಥೇಶ್ವರ ಸನ್ನಿಧಿಗೆ ಭೇಟಿ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಎ. 04. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಇಂದು ಬೆಳಗ್ಗೆ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದ್ದಾರೆ.


ಹೆಲಿಕಾಪ್ಟರ್ ಮೂಲಕ ಅಗಮಿಸಿದ ಇವರು ನೇರ ಧರ್ಮಸ್ಥಳದ ಸನ್ನಿಧಿ ವಸತಿಗೃಹಕ್ಕೆ ಬಂದು ಅಲ್ಲಿಂದ ದೇವರ ದರ್ಶನ ಪಡೆದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡ ಮಿಥುನ್ ರೈ, ಎಮ್.ಎಲ್.ಸಿ ಹರೀಶ್ ಕುಮಾರ್, ವಸಂತ ಬಂಗೇರ, ಗಂಗಾಧರ್ ಗೌಡ, ರಂಜನ್ ಗೌಡ, ಶೈಲೇಶ್ ಕುಮಾರ್, ಬೆಳ್ತಂಗಡಿ ಯೂತ್ ಕಾಂಗ್ರೆಸ್ ಅಧ್ಯಕ್ಷ ಅನಿಲ್ ಪೈ, ಇಂಟಕ್ ಅಧ್ಯಕ್ಷ ಅನೂಪ್ ಬಂಗೇರ, ನವೀನ್ ಗೌಡ ಸವಣಾಲು, ಚಂದು ಎಲ್, ವಸಂತ್ ಬಿ.ಕೆ ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

 

Also Read  ಕೊರೋನಾ ಆರ್ಭಟ ನಡುವೆ ಭರ್ಜರಿ ಕೃಷಿ ➤ ದ. ಕನ್ನಡದಲ್ಲಿ ಏರಿಕೆ ಕಂಡ ಭತ್ತದ ಕೃಷಿ

error: Content is protected !!
Scroll to Top