ಮುಲ್ಕಿ: ಬೈಕ್ ನಿಂದ ಬಿದ್ದು ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com ಮುಲ್ಕಿ, ಎ. 05. ಬೈಕ್ ನಿಂದ ಬಿದ್ದು ವ್ಯಕ್ತಿಯೋರ್ವ ಮೃತಪಟ್ಟ ಘಟನೆ ಮುಲ್ಕಿಯಲ್ಲಿ ನಡೆದಿದೆ.


ಮೃತರನ್ನು ಕಿನ್ನಿಗೋಳಿ ಸಮೀಪದ ಕಿಲೆಂಜೂರು ನಿವಾಸಿ, ಆರ್‌ಎಸ್‌ಎಸ್‌ ಕಾರ್ಯಕರ್ತ ವಿಶ್ವನಾಥ ಶೆಟ್ಟಿ(46 ) ಎಂದು ಗುರುತಿಸಲಾಗಿದೆ. ಇವರು ಮುಲ್ಕಿಯ ಬಪ್ಪನಾಡು ಜಾತ್ರೆಗೆಂದು ತೆರಳುತ್ತಿದ್ದ ಸಂದರ್ಭ ಬೈಕ್ ನಿಂದ ಆಕಸ್ಮಿಕವಾಗಿ ಬಿದ್ದಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

 

error: Content is protected !!

Join the Group

Join WhatsApp Group