ದೇಶದಲ್ಲಿ ಕೊರೋನಾ ಮರಣ ಮೃದಂಗ ➤ ರಾತ್ರಿ 8.45ಕ್ಕೆ ದೇಶವನ್ನು ಉದ್ದೇಶಿಸಿ ಪ್ರಧಾನಿ ಮಾತು

(ನ್ಯೂಸ್ ಕಡಬ) newskadaba.com ನವದೆಹಲಿ, ಎ.20. ದೇಶದಲ್ಲಿ ಕೊರೋನಾ ಮರಣ ಮೃದಂಗ ಬಾರಿಸುತ್ತಿರುವುದರ ನಡುವೆಯೇ ರಾಜ್ಯದಲ್ಲಿ ಲಾಕ್‍ಡೌನ್ ಮಾಡುವ ಬಗ್ಗೆ ಚರ್ಚೆ ನಡೆದಿದೆ.

ರಾಜ್ಯಪಾಲರ ನೇತೃತ್ವದಲ್ಲಿ ಸರ್ವ ಪಕ್ಷ ಸಭೆ ನಡೆದಿದ್ದು, ಲಾಕ್‍ಡೌನ್ ಮಾಡುವ ಬಗ್ಗೆ ಬಹುತೇಕ ನಾಯಕರು ಒಲವನ್ನು ವ್ಯಕ್ತಪಡಿಸಿದ್ದಾರೆ. ಈ ನಡುವೆಯೇ ಪ್ರಧಾನಿ ನರೇಂದ್ರ ಮೋದಿಯವರು ಇಂದು ರಾತ್ರಿ 8.45 ಕ್ಕೆ ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಪ್ರಧಾನಿಯ ಮಾತಿನತ್ತ ಇದೀಗ ಎಲ್ಲರ ಚಿತ್ತ ಹರಿದಿದ್ದು, ಲಾಕ್‍ಡೌನ್ ವಿಚಾರವಾಗಿ ಪ್ರಮುಖ ನಿರ್ಧಾರ ಕೈಗೊಳ್ಳುವ ಸಾಧ್ಯತೆಯಿದೆ.

Also Read  ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿರುವ ಪುಟ್ಟ ಮಗು ➤ ಮಂಗಳೂರಿನಿಂದ ಬೆಂಗಳೂರಿಗೆ ಝೀರೋ ಟ್ರಾಫಿಕ್ ನಲ್ಲಿ ಕರೆದೊಯ್ಯಲು ಸಿದ್ಧತೆ

 

 

 

.

 

error: Content is protected !!
Scroll to Top