ವಿಟ್ಲ: ಜೀವನದಲ್ಲಿ ಜಿಗುಪ್ಸೆಗೊಂಡು ಬಾವಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ವಿಟ್ಲ, ಎ. 22. ಜೀವನದಲ್ಲಿ ಜಿಗುಪ್ಸೆಗೊಂಡ ವ್ಯಕ್ತಿಯೋರ್ವರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲ ಕಸಬಾ ಗ್ರಾಮದ ಚಂದಳಿಕೆ ಎಂಬಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡವರನ್ನು ವಿಟ್ಲ ಕಸಬಾ ಗ್ರಾಮದ ಉಕ್ಕುಡ ಆಲಂಗಾರು ನಿವಾಸಿ ಬಾಬು ಆಚಾರ್ಯ (75) ಎಂದು ಗುರುತಿಸಲಾಗಿದೆ. ಇವರು ಎ. 21 ರಂದು ರಾತ್ರಿ 10:30ರ ವೇಳೆಗೆ ತಮ್ಮನ ಮನೆಗೆ ಹೋದವರು ಇಂದು ಬೆಳಗ್ಗೆ 07.30 ಗಂಟೆಯ ನಡುವಿನ ಸಮಯದಲ್ಲಿ ಈ ಕೃತ್ಯವೆಸಗಿದ್ದಾರೆ ಎನ್ನಲಾಗಿದೆ. ಇವರು ಮಧುಮೇಹ ಹಾಗೂ ರಕ್ತದೊತ್ತಡ ಕಾಯಿಲೆಯಿಂದ ಬಳಲುತ್ತಿದ್ದು, ಜೀವನದಲ್ಲಿ ಜಿಗುಪ್ಸೆಗೊಂಡು ಬಾವಿಗೆ ಹಾರಿ ಆತ್ಮಹತ್ಯೆ ಮಡಿಕೊಂಡಿದ್ದಾರೆ. ಈ ಕುರಿತು ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Also Read  ಬ್ರಿಟನ್‌ನಿಂದ ಮಂಗಳೂರಿನ 56 ಮಂದಿಯ ಆಗಮನ ➤ ಕೊರೋನಾ 2ನೇ ಅಲೆಯ ಭೀತಿಯಲ್ಲಿ ಕರಾವಳಿ

error: Content is protected !!
Scroll to Top