ಇಂದಿನಿಂದ ಮಧ್ಯಾಹ್ನ 12 ಗಂಟೆಯವರೆಗೆ ದಿನಸಿ ಅಂಗಡಿಗಳು ಓಪನ್ ➤ ಸರಕಾರದಿಂದ ಹೊಸ ಮಾರ್ಗಸೂಚಿ ಪ್ರಕಟ

(ನ್ಯೂಸ್ ಕಡಬ) newskadaba.com ಬೆಂಗಳೂರು, ಮೇ.02. ರಾಜ್ಯ ಸರಕಾರವು ಕೊರೋನ ಕರ್ಫ್ಯೂ ಮಾರ್ಗಸೂಚಿಯನ್ನು ಮತ್ತೆ ಪರಿಷ್ಕರಿಸಿದ್ದು, ರಾಜ್ಯದಲ್ಲಿ ಬೆಳಗ್ಗೆ 6 ರಿಂದ ಮಧ್ಯಾಹ್ನ 12 ರವರೆಗೆ ದಿನಸಿ ಅಂಗಡಿಗಳನ್ನು ತೆರೆಯಲು ಅವಕಾಶ ನೀಡಿ ಆದೇಶ ಹೊರಡಿಸಿದೆ.

ಇಂದಿನಿಂದಲೇ (ಮೇ.2) ಅನ್ವಯವಾಗುವಂತೆ ಹೊಸ ಮಾರ್ಗಸೂಚಿಯು ಜಾರಿಗೆ ಬರಲಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ. ಹಾಪ್​ಕಾಮ್ಸ್​, ಹಾಲಿನ ಬೂತ್​, ತಳ್ಳುವ ಗಾಡಿ ವ್ಯಾಪಾರಕ್ಕೆ ಬೆಳಗ್ಗೆ 6ರಿಂದ ಸಂಜೆ 6 ಗಂಟೆವರೆಗೂ ಅವಕಾಶ ನೀಡಲಾಗಿದೆ. ಆದರೆ ಸಂತೆ ಮತ್ತು ಮಾರುಕಟ್ಟೆಗಳು ಸಂಪೂರ್ಣ ಬಂದ್ ಆಗಿಯೇ ಇರಲಿದ್ದು, ಅವುಗಳಿಗೆ ವಿನಾಯತಿ ನೀಡಿಲ್ಲ. ಎಪಿಎಂಸಿ, ದಿನಸಿ ಅಂಗಡಿಗಳಿಗೆ ಬೆಳಗ್ಗೆ 6 ರಿಂದ ಮಧ್ಯಾಹ್ನ 12 ರವರೆಗೆ ಅವಕಾಶ ನೀಡಿದೆ. ಮಾರುಕಟ್ಟೆಗಳಲ್ಲಿ ಜನಸಂದಣಿ ತಪ್ಪಿಸಲು ಸರ್ಕಾರ ಈ ಹೊಸ ನಿರ್ಧಾರ ಕೈಗೊಳ್ಳಲಾಗಿದ್ದು, ಕೋವಿಡ್ ಮಾರ್ಗಸೂಚಿ ಪಾಲಿಸಿ ವ್ಯಾಪಾರ ಮಾಡಬೇಕು ಎಂದು ತಿಳಿಸಿದೆ.

 

 

 

error: Content is protected !!

Join the Group

Join WhatsApp Group