ಮತ್ತೆ ಸದ್ದು ಮಾಡಿದ ಜಾರಕಿಹೊಳಿ ಸೆಕ್ಸ್ ಸಿಡಿ ಪ್ರಕರಣ ➤ ಸಿಡಿ ಲೇಡಿ ಹೇಳಿದ್ದಾದರೂ ಏನು ಗೊತ್ತೇ..?

(ನ್ಯೂಸ್ ಕಡಬ) newskadaba.com ಮೇ.05. ಕೊರೋನಾದಿಂದಾ ತಣ್ಣಗಾಗಿದ್ದ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣವು ಇದೀಗ ಮತ್ತೆ ಸದ್ದು ಮಾಡಿದೆ.

ಸಿಡಿ ಪ್ರಕರಣವನ್ನು ಹಿಂಪಡೆಯುವಂತೆ ತನ್ನ ಪರ ವಕೀಲರಿಗೆ ಆಮಿಷ ಒಡ್ಡಲಾಗುತ್ತಿದೆ ಎಂದು ಸಂತ್ರಸ್ಥ ಯುವತಿ ಆರೋಪಿಸಿದ್ದು, ಈ ಬಗ್ಗೆ ತನಿಖಾಧಿಕಾರಿಗೆ ಹಾಗೂ ನಗರ ಪೊಲೀಸ್ ಆಯುಕ್ತರಿಗೆ ದೂರು ಸಲ್ಲಿಸಿದ್ದಾರೆ. ಕೇಸ್ ಹಿಂಪಡೆದರೆ ಕೋಟ್ಯಾಂತರ ರೂ. ನೀಡುವುದಾಗಿ ಆಮಿಷ ಒಡ್ಡಿದ್ದಾರೆ ಎಂದು ಸಂತ್ರಸ್ಥ ಯುವತಿ ದೂರಿನಲ್ಲಿ ಉಲ್ಲೇಖಿಸಿರುವುದಾಗಿ ತಿಳಿದುಬಂದಿದೆ.

 

 

Also Read  ಗುತ್ತಿಗಾರು: ಅಡಿಕೆ ಕದ್ದರೆಂದು ದೇವಸ್ಥಾನಕ್ಕೆ ತೆರಳಿ ಹರಕೆ ಸಲ್ಲಿಸಿದ ಕುಟುಂಬ

 

error: Content is protected !!
Scroll to Top