ರಾಜ್ಯದಲ್ಲಿ ಮತ್ತೆ 14 ದಿನಗಳ ಕಾಲ ಲಾಕ್‍ಡೌನ್ ವಿಸ್ತರಣೆ..? ➤ ಜೂನ್ 07 ರ ವರೆಗೆ ಕರುನಾಡು ಸಂಪೂರ್ಣ ಲಾಕ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಮೇ.01. ರಾಜ್ಯದಲ್ಲಿ ಜೂನ್ 07 ರ ವರೆಗೆ ಲಾಕ್‍ಡೌನ್ ವಿಸ್ತರಿಸಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಘೋಷಿಸಿದ್ದಾರೆ.

ಇದುವರೆಗೆ ಮೇ 24 ರ ವರೆಗೆ ರಾಜ್ಯದಲ್ಲಿ ಲಾಕ್‍ಡೌನ್ ಘೋಷಣೆ ಮಾಡಲಾಗಿತ್ತು. ಇದೀಗ ಕೊರೋನಾ ಸೋಂಕು ಹತೋಟಿಗೆ ಬಾರದ ಹಿನ್ನೆಲೆಯಲ್ಲಿ ತಜ್ಞರ ವರದಿಯನುಸಾರ ಮತ್ತೆ 14 ದಿನಗಳ ಕಾಲ ಲಾಕ್‍ಡೌನ್ ಮುಂದುವರಿಸಲಾಗಿದ್ದು, ಜೂನ್ 07 ರ ವರೆಗೆ ಕರುನಾಡು ಸಂಪೂರ್ಣ ಸ್ತಬ್ಧವಾಗಲಿದೆ ಎಂದು ಸಿಎಂ ಯಡಿಯೂರಪ್ಪ ಘೋಷಿಸಿರುವುದಾಗಿ ದೃಶ್ಯ ಮಾಧ್ಯಮವೊಂದು ವರದಿ ಮಾಡಿದೆ.

 

 

error: Content is protected !!

Join the Group

Join WhatsApp Group