ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಸಿಎಂ ಯಡಿಯೂರಪ್ಪರಿಂದ ಗುಡ್ ನ್ಯೂಸ್ ➤ ಅದೇನೆಂದರೆ…!!

(ನ್ಯೂಸ್ ಕಡಬ) newskadaba.com ಬೆಳಗಾವಿ, ಜೂ.04. ರಾಜ್ಯದಲ್ಲಿ ಕೊರೋನಾ ಸೋಂಕಿನ ತೀವ್ರತೆ ಹತೋಟಿಗೆ ಬಂದರೆ ಮಾತ್ರ ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ನಡೆಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.

ಅವರು ಶುಕ್ರವಾರದಂದು ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರ ಜೊತೆ ಮಾತನಾಡಿ, ಎಸ್ಸೆಸ್ಸೆಲ್ಸಿ ಪರೀಕ್ಷೆಯ ವಿಚಾರದಲ್ಲಿ ವಿದ್ಯಾರ್ಥಿಗಳು ಮತ್ತು ಪೋಷಕರು ಯಾವುದೇ ಕಾರಣಕ್ಕೂ ಆತಂಕ ಪಡಬೇಕಾಗಿಲ್ಲ. ಕೊರೋನಾ ಸೋಂಕಿನ ಆತಂಕ ಸುಧಾರಣೆ ಕಂಡರೆ ಮಾತ್ರ ಪರೀಕ್ಷೆ ನಡೆಸಲಾಗುವುದು. ನಿಯಂತ್ರಣಕ್ಕೆ ಬರದಿದ್ದರೆ ಪರೀಕ್ಷೆಯನ್ನು ರದ್ದು ಪಡಿಸಲಾಗುವುದು ಎಂದರು.

Also Read  ಈಜು ಬಾರದೆ ಮೂವರು ಯುವಕರು ನೀರುಪಾಲು

 

 

 

error: Content is protected !!
Scroll to Top