MRPL ನೇಮಕಾತಿಯಲ್ಲಿ ಸ್ಥಳೀಯರಿಗೆ ಅನ್ಯಾಯ ➤ ಪ್ರತಿಭಟನೆ ನಡೆಸಿ ಆಕ್ರೋಶ

(ನ್ಯೂಸ್ ಕಡಬ) newskadaba,ಮಂಗಳೂರು ಜೂ.06: ಎಂಆರ್​ಪಿಎಲ್​ನ ಉದ್ಯೋಗ ನೇಮಕಾತಿಯಲ್ಲಿ ಸ್ಥಳೀಯರಿಗೆ ಆಗಿರುವ ಅನ್ಯಾಯ ಖಂಡಿಸಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮನೆ-ಮನೆ ಪ್ರತಿಭಟನೆ ನಡೆಸಲಾಯಿತು. ಡಿವೈಎಫ್ಐ ನೇತೃತ್ವದಲ್ಲಿ ಸಮಾನ ಮನಸ್ಕ ಸಂಘಟನೆಗಳ ಬೆಂಬಲದೊಂದಿಗೆ ಮನೆಮನೆ ಪ್ರತಿಭಟನೆ ನಡೆಯಿತು.

 

ತುಳುನಾಡ ಅಭಿವೃದ್ದಿಯಲ್ಲಿ ತುಳುವರಿಗೆ ದೊಡ್ಡ ಪಾಲು ಸಿಗಬೇಕು. ಸ್ಥಳೀಯರಿಗೆ ಉದ್ಯೋಗ ನಿರಾಕರಿಸುವ ಕಂಪನಿಗಳಿಗೆ ಬೀಗ ಜಡಿಯಿರಿ ಎಂಬ ಫಲಕಗಳೊಂದಿಗೆ ಡಿವೈಎಫ್ಐ, ಎಸ್​ಎಫ್ಐ ಕಾರ್ಯಕರ್ತರು, ಸಿಪಿಎಂ, ಕಾಂಗ್ರೆಸ್, ಜೆಡಿಎಸ್ ಮುಖಂಡರು ಪ್ರತಿಭಟನೆಯಲ್ಲಿ ಭಾಗವಹಿಸಿದರು.

error: Content is protected !!

Join the Group

Join WhatsApp Group