ಪಕ್ಷ ಬಿಡುವ ಪ್ರಶ್ನೆಯೇ ಇಲ್ಲ: ಶಕುಂತಲಾ ಶೆಟ್ಟಿ ► ಬಿಜೆಪಿ ಸೇರಲಿದ್ದಾರೆ ಎನ್ನುವುದಕ್ಕೆ ಪ್ರತಿಕ್ರಿಯಿಸಿದ ಶಕುಂತಲಾ ಶೆಟ್ಟಿ

(ನ್ಯೂಸ್ ಕಡಬ) newskadaba.com ಪುತ್ತೂರು, ಅ.26. ಕಾಂಗ್ರೆಸ್ ಪಕ್ಷದ ತತ್ವ ಸಿದ್ಧಾಂತಗಳನ್ನು ಒಪ್ಪಿಕೊಂಡು ನಾನು ಪಕ್ಷಕ್ಕೆ ಸೇರ್ಪಡೆಗೊಂಡಿದ್ದು, ಪಕ್ಷವನ್ನು ಬಿಡುವ ಪ್ರಶ್ನೆಯೇ ಇಲ್ಲ ಎಂದು ಪುತ್ತೂರು ಶಾಸಕಿ ಶ್ರೀಮತಿ ಶಕುಂತಲಾ ಶೆಟ್ಟಿ ಸ್ಪಷ್ಟಪಡಿಸಿದ್ದಾರೆ.

ಬಿಜೆಪಿಯ ಪರಿವರ್ತನಾ ಸಮಾವೇಶದಲ್ಲಿ ಬಿಜೆಪಿಯಿಂದ ಕಾಂಗ್ರೆಸ್ ಸೇರಿ ಶಾಸಕಿಯಾಗಿರುವ ಶಕುಂತಲಾ ಶೆಟ್ಟಿಯವರು ಪುನಃ ಬಿಜೆಪಿ ಸೇರ್ಪಡೆಯಾಗುತ್ತಾರೆ ಎಂದು ಕೆಲವು ಮಾಧ್ಯಮಗಳು ವರದಿ ಮಾಡಿದ್ದವು. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಶಾಸಕಿ ಕಾಂಗ್ರೆಸ್ ಪಕ್ಷದ ತತ್ವ ಸಿದ್ಧಾಂತಗಳನ್ನು ಮೆಚ್ಚಿ ಪಕ್ಷಕ್ಕೆ ಸೇರಿದ್ದು, ಪಕ್ಷ ಬಿಡುವ ಪ್ರಶ್ನೆಯೇ ಇಲ್ಲ ಎಂದು ತನ್ನ ಫೇಸ್‌ಬುಕ್‌ ವಾಲ್ ನಲ್ಲಿ ಸ್ಪಷ್ಟಪಡಿಸಿದ್ದಾರೆ. ಇದರೊಂದಿಗೆ ಶಕುಂತಲಾ ಶೆಟ್ಟಿಯವರು ಪಕ್ಷಾಂತರ ಮಾಡುತ್ತಾರೆ ಎಂದು ಹಬ್ಬಿರುವ ಗುಲ್ಲಿಗೆ ತೆರೆಬಿದ್ದಿದೆ.

error: Content is protected !!

Join WhatsApp Group

WhatsApp Share