ಕಡಬ: ನಾಪತ್ತೆಯಾಗಿದ್ದ ಯುವಕ ಠಾಣೆಗೆ ಹಾಜರ್

(ನ್ಯೂಸ್ ಕಡಬ) newskadaba.com ಕಡಬ, ಜೂ.15. ಹದಿನೈದು ದಿನಗಳ ಹಿಂದೆ ನಾಪತ್ತೆಯಾಗಿದ್ದ ವ್ಯಕ್ತಿಯೋರ್ವರು ಮಂಗಳವಾರದಂದು ಪತ್ತೆಯಾಗಿದ್ದಾರೆ.

ಕಡಬ ತಾಲೂಕಿನ ಆಲಂಕಾರು ಗ್ರಾಮ ಪಜ್ಜಡ್ಕ ನಿವಾಸಿ ದಿ| ಶೇಷಪ್ಪ ಗೌಡ ಎಂಬವರ ಪುತ್ರ ಗಣೇಶ್ ಪ್ರಸಾದ್ (34) ಎಂಬವರು ಮೇ.28 ರಂದು ಯಾರಿಗೂ ಹೇಳದೆ ಮನೆಯಿಂದ ನಾಪತ್ತೆಯಾಗಿದ್ದರು. ಈ ಬಗ್ಗೆ ಅವರ ಸಹೋದರ ನೀಡಿದ ದೂರಿ‌ನಂತೆ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಕೆಲಸದ ನಿಮಿತ್ತ ಮಂಗಳೂರಿಗೆ ತೆರಳಿದ್ದ ಇವರು ಸೋಮವಾರದಂದು ತನ್ನ ಮನೆಯವರೊಂದಿಗೆ ಠಾಣೆಗೆ ಆಗಮಿಸಿ ಹೇಳಿಕೆ ನೀಡಿದ್ದಾರೆ.

Also Read  ಕೈಕಾಲು ಕಟ್ಟಿದ ರೀತಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ನೀರಿನಲ್ಲಿ ಪತ್ತೆ ► ಕೊಲೆ ಶಂಕೆ

 

 

 

error: Content is protected !!
Scroll to Top