ಗಂಗೆಯಲ್ಲಿ ತೇಲಿ ಬಂದ ಪೆಟ್ಟಿಗೆಯಲ್ಲಿತ್ತು 21 ದಿನದ ಕಂದಮ್ಮ..?!

(ನ್ಯೂಸ್ ಕಡಬ) newskadaba,ಗಾಜಿಪುರ ಜೂ.15: ನವಜಾತ ಶಿಶುವನ್ನು ಪೆಟ್ಟಿಗೆಯಲ್ಲಿಟ್ಟು ಗಂಗಾನದಿಯಲ್ಲಿ ತೇಲಿ ಬಿಟ್ಟಿರುವ ಘಟನೆ ದಾದ್ರಿಘಾಟ್​ ಬಳಿ ನಡೆದಿದೆ. ಗಾಳಿ ಜೋರಾಗಿ ಬೀಸಿದ್ದರಿಂದ ಮರದ ಪೆಟ್ಟಿಗೆಯು ದಡಕ್ಕೆ ಬಂದಿತ್ತು. ಅದರಲ್ಲಿ ಮಗು ಅಳುವ ಶಬ್ದ ಕೇಳಿ ಬಂದಿದ್ದು, ಸ್ಥಳೀಯರು ಆ ಬಾಕ್ಸ್​ ಅನ್ನು ತೆರೆದು ನೋಡಿದಾಗ ಅದರಲ್ಲಿ ಮಗು ಇರುವುದು ಪತ್ತೆಯಾಗಿದೆ.

21 ದಿನದ ಮಗುವಿದ್ದ ಆ ಪೆಟ್ಟಿಗೆಯಲ್ಲಿ ದುರ್ಗಾದೇವಿ ಮತ್ತು ವಿಷ್ಣುವಿನ ಫೋಟೋಗಳಿದ್ದವು. ಇದರೊಂದಿಗೆ ಮಗುವಿನ ಜಾತಕ ಕೂಡ ಇದೆ ಎಂದು ಸ್ಥಳೀಯರು ತಿಳಿಸಿದ್ದಾರೆ.ಪೆಟ್ಟಿಗೆಯಲ್ಲಿ ಮಗುವನ್ನು ಯಾರಿಟ್ಟರು, ಯಾಕಿಟ್ಟರು ಎಂಬ ಮಾಹಿತಿ ತಿಳಿದಿಲ್ಲ. ಗಂಗೆಯಲ್ಲಿ ತೇಲಿಬಂದ ಈ ಮಗು ನಿಜಕ್ಕೂ ದೇವತೆ ಎಂದು ಸ್ಥಳೀಯರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಗುಲ್ಲು ಎಂಬ ವ್ಯಕ್ತಿ ಮಗುವನ್ನು ಮನೆಗೆ ಕರೆದೊಯ್ದು ಸ್ನಾನ ಮಾಡಿಸಿ ಹಾಲು ಕೊಟ್ಟಿದ್ದಾರೆ. ಸೋಮವಾರ ಈ ಪ್ರದೇಶದಲ್ಲಿ ಸಾಕಷ್ಟು ಮಳೆಯಾದ್ದರಿಂದ ಮಂಗಳವಾರ ಈ ವಿಚಾರವನ್ನು ಪೊಲೀಸರಿಗೆ ತಿಳಿಸಲಾಗಿದೆ.

error: Content is protected !!
Scroll to Top