ಕುಟುಂಬ ಕಲಹ ಬಗೆಹರಿಸಿದ ಹಿನ್ನೆಲೆ ➤ ತಂದೆಯ ತಲೆಗೆ ಕಲ್ಲಿನಿಂದ ಜಜ್ಜಿ ಹತ್ಯೆಗೈದ ಪಾಪಿಪುತ್ರ

(ನ್ಯೂಸ್ ಕಡಬ) Newskadaba.com ಕೋಲಾರ, ಜೂ. 18. ಮಲಗಿದ್ದ ತಂದೆಯ ತಲೆಗೆ ಕಲ್ಲಿನಿಂದ ಜಜ್ಜಿ ಭೀಕರವಾಗಿ ಹತ್ಯೆಗೈದ ಘಟನೆ ಶ್ರೀನಿವಾಸಪುರ ತಾಲೂಕಿನ ಅಂಬೇಡ್ಕರ್ ಪಾಳ್ಯ ಎಂಬಲ್ಲಿ ನಡೆದಿದೆ.

ಅಂಬೇಡ್ಕರ್ ಪಾಳ್ಯ ನಿವಾಸಿ ವೆಂಕಟೇಶ್ (65) ತನ್ನ ಪುತ್ರನಿಂದಲೇ ಹತ್ಯೆಗೀಡಾದ ದುರ್ದೈವಿ. ಘಟನೆಯ ಬಳಿಕ ಆರೋಪಿ ಪುತ್ರ ನವೀನ್ ಪ್ರಕಾಶ್ ಎಂಬಾತನನ್ನು ಸ್ಥಳೀಯ ನಿವಾಸಿಗಳು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಮಗನ ಕೌಟುಂಬಿಕ ಸಮಸ್ಯೆಯನ್ನು ಬಗೆಹರಿಸಲು ತಂದೆ ಪ್ರಯತ್ನಿಸಿದ್ದರು, ಈ ವಿಚಾರಕ್ಕೆ ಸಂಬಂಧಿಸಿ ಗುರುವಾರದಂದು ರಾತ್ರಿ ತಂದೆ ಮಗನ ನಡುವೆ ಗಲಾಟೆ ನಡೆದಿತ್ತು ಎಂದು ಹೇಳಲಾಗಿದೆ. ಈ ವಿಚಾರವನ್ನೇ ನೆಪವಾಗಿರಿಸಿದ ಮಗ ರಾತ್ರಿ ತಂದೆ ಮಲಗಿದ್ದ ವೇಳೆ ರುಬ್ಬುವ ಕಲ್ಲನ್ನು ತಂದೆಯ ತಲೆಗೆ ಎತ್ತಿ ಹಾಕಿ ಹತ್ಯೆಗೈದಿದ್ದಾನೆ. ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

Also Read  ಬೆಂಗಳೂರು: 320 ಹವಾನಿಯಂತ್ರಿತ ಎಲೆಕ್ಟ್ರಿಕ್ ಬಸ್‌ ಗಳ ಸಂಚಾರ ಆರಂಭಿಸಲಿದೆ BMTC

error: Content is protected !!
Scroll to Top